Featured

ಭಾರತಕ್ಕೆ ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ  ಜುಲೈ 31ರವರೆಗೆ ವಿಸ್ತರಣೆ -Vishwanews24

ಭಾರತಕ್ಕೆ ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ  ಜುಲೈ 31ರವರೆಗೆ ವಿಸ್ತರಣೆ -Vishwanews24

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆ ಇಳಿಕೆಯಾಗುತ್ತಿದೆ. ಈ ನಡುವೆ ಕೊರೊನಾದ ಮೂರನೇ ಅಲೆಯ ಆತಂಕವೂ ಇದೆ. ಈ ಎಲ್ಲಾ ಕಾರಣದಿಂದ ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಡಿಜಿಸಿಎ ಜುಲೈ 31ರವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, “ಭಾರತದಿಂದ ಹೊರಡುವ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲಿನ ನಿರ್ಬಂಧಗಳನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಸರಕು ಸಾಗಾಟ ವಿಮಾನ ಹಾಗೂ ಆಯ್ದ ದೇಶಗಳೊಂದಿಗಿನ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ವಿಮಾನ ಸಂಚಾರ ಎಂದಿನಂತೆ ಮುಂದುವರಿಯಲಿದೆ” ಎಂದು ನಾಗರಿಕ ವಿಮಾನಯಾನ ಕಾವಲು ಸಂಸ್ಥೆ ಪ್ರಕಟಣೆಯಲ್ಲಿ ಹೇಳಿದೆ.

“ಕೊರೊನಾ ಪ್ರಕರಣಗಳ ಆಧಾರದ ಮೇಲೆ ಆಯ್ದ ಮಾರ್ಗಗಳಲ್ಲಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಬಹುದು” ಎಂದು ತಿಳಿಸಿದೆ.

ಕೊರೊನಾ ಸೋಂಕು ವ್ಯಾಪಿಸಲು ಪ್ರಾರಂಭವಾದ ನಂತರ 2020ರ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಗಿತ್ತು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

41 minutes ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

54 minutes ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

1 hour ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

2 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

3 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

3 hours ago