ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆ ಇಳಿಕೆಯಾಗುತ್ತಿದೆ. ಈ ನಡುವೆ ಕೊರೊನಾದ ಮೂರನೇ ಅಲೆಯ ಆತಂಕವೂ ಇದೆ. ಈ ಎಲ್ಲಾ ಕಾರಣದಿಂದ ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಡಿಜಿಸಿಎ ಜುಲೈ 31ರವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, “ಭಾರತದಿಂದ ಹೊರಡುವ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲಿನ ನಿರ್ಬಂಧಗಳನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಸರಕು ಸಾಗಾಟ ವಿಮಾನ ಹಾಗೂ ಆಯ್ದ ದೇಶಗಳೊಂದಿಗಿನ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ವಿಮಾನ ಸಂಚಾರ ಎಂದಿನಂತೆ ಮುಂದುವರಿಯಲಿದೆ” ಎಂದು ನಾಗರಿಕ ವಿಮಾನಯಾನ ಕಾವಲು ಸಂಸ್ಥೆ ಪ್ರಕಟಣೆಯಲ್ಲಿ ಹೇಳಿದೆ.
“ಕೊರೊನಾ ಪ್ರಕರಣಗಳ ಆಧಾರದ ಮೇಲೆ ಆಯ್ದ ಮಾರ್ಗಗಳಲ್ಲಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಬಹುದು” ಎಂದು ತಿಳಿಸಿದೆ.
ಕೊರೊನಾ ಸೋಂಕು ವ್ಯಾಪಿಸಲು ಪ್ರಾರಂಭವಾದ ನಂತರ 2020ರ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…