Featured

ಭಾರತಕ್ಕೆ ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ  ಜುಲೈ 31ರವರೆಗೆ ವಿಸ್ತರಣೆ -Vishwanews24

ಭಾರತಕ್ಕೆ ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ  ಜುಲೈ 31ರವರೆಗೆ ವಿಸ್ತರಣೆ -Vishwanews24

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆ ಇಳಿಕೆಯಾಗುತ್ತಿದೆ. ಈ ನಡುವೆ ಕೊರೊನಾದ ಮೂರನೇ ಅಲೆಯ ಆತಂಕವೂ ಇದೆ. ಈ ಎಲ್ಲಾ ಕಾರಣದಿಂದ ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಡಿಜಿಸಿಎ ಜುಲೈ 31ರವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, “ಭಾರತದಿಂದ ಹೊರಡುವ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲಿನ ನಿರ್ಬಂಧಗಳನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಸರಕು ಸಾಗಾಟ ವಿಮಾನ ಹಾಗೂ ಆಯ್ದ ದೇಶಗಳೊಂದಿಗಿನ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ವಿಮಾನ ಸಂಚಾರ ಎಂದಿನಂತೆ ಮುಂದುವರಿಯಲಿದೆ” ಎಂದು ನಾಗರಿಕ ವಿಮಾನಯಾನ ಕಾವಲು ಸಂಸ್ಥೆ ಪ್ರಕಟಣೆಯಲ್ಲಿ ಹೇಳಿದೆ.

“ಕೊರೊನಾ ಪ್ರಕರಣಗಳ ಆಧಾರದ ಮೇಲೆ ಆಯ್ದ ಮಾರ್ಗಗಳಲ್ಲಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಬಹುದು” ಎಂದು ತಿಳಿಸಿದೆ.

ಕೊರೊನಾ ಸೋಂಕು ವ್ಯಾಪಿಸಲು ಪ್ರಾರಂಭವಾದ ನಂತರ 2020ರ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಗಿತ್ತು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago