ನವದೆಹಲಿ: ಡೇನಿಯಲ್ ಸ್ಮಿತ್ ನಿವೃತ್ತಿಹೊಂದುತ್ತಿರುವ ಕಾರಣ ಭಾರತೀಯ ಮೂಲದ ಅತುಲ್ ಕೇಶಪ್ ಅವರನ್ನು ಅಮೆರಿಕ ಭಾರತಕ್ಕೆ ತಾತ್ಕಾಲಿಕ ರಾಯಭಾರಿಯಾಗಿ ನೇಮಿಸಿದೆ. ಕೇಶಪ್ ಅವರು ಈ ಮೊದಲು ಶ್ರೀಲಂಕಾ, ಮಾಲ್ಡೀವ್ಸ್ ರಾಯಭಾರಿಯಾಗಿದ್ದರು, 1994ರಲ್ಲಿ ಅಮೆರಿಕ ವಿದೇಶಾಂಗ ಸೇವೆಗೆ ಸೇರಿದ ಅತುಲ್, ದಕ್ಷಿಣ ಮತ್ತು ಕೇಂದ್ರ ಏಷ್ಯಾ ವ್ಯವಹಾರಗಳ ವಿಭಾಗದಲ್ಲಿ ಉಪಸಹಾಯಕ ಕಾರ್ಯದರ್ಶಿಯಾಗಿದ್ದರು.
ಪಂಜಾಬ್ ಮೂಲದ ಅತುಲ್ ತಂದೆ ಕೇಶಪ್ ಚಂದರ್ ಸೆನ್, ನೈಜೀರಿಯಾದಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಅರ್ಥಶಾಸ್ತ್ರಜ್ಞರಾಗಿದ್ದರು. ತಾಯಿ ಜೋ ಕ್ಯಾಲ್ವರ್ಟ್ ಅಮೆರಿಕ ವಿದೇಶಾಂಗ ಸೇವೆಯಲ್ಲಿದ್ದು, ಸೆನ್ ರನ್ನು ಲಂಡನ್ ನಲ್ಲಿ ವಿವಾಹವಾಗಿದ್ದರು. ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯಲ್ಲೂ ಸೇವೆ ಸಲ್ಲಿಸಿದ್ದರು, ಅತುಲ್ 1971ರ ಜೂನ್ ನಲ್ಲಿ ನೈಜರಿಯಾದಲ್ಲಿ ಜನಿಸಿದ್ದರು.
2003ರಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿಯ ಉತ್ತರ ಆಫ್ರಿಕಾ ಮತ್ತು ಮಧ್ಯ ಪೂರ್ವ ಪ್ರದೇಶಗಳ ನಿರ್ದೇಶಕರಾಗಿ ಅವರು ಶ್ವೇತಭವನ ಪ್ರವೇಶಿಸಿದ್ದರು. 2008ರಿಂದ 2010ರ ಅವಧಿಯಲ್ಲಿ ಅಂತಾರಾಷ್ಟ್ರೀಯ ಸಾಂಸ್ಥಿಕ ವ್ಯವಹಾರಗಳ ವಿಭಾಗದ ವಿಶ್ವಸಂಸ್ಥೆ ಮಾನವ ಹಕ್ಕುಗಳ ನಿರ್ದೇಶಕರೂ ಆಗಿದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…