Featured

ಭಾರತಕ್ಕೆ ಆಗಮಿಸಲಿವೆ ಫ್ರಾನ್ಸ್​ ಮೂಲದ ರಫೇಲ್​​ ಯುದ್ಧ ವಿಮಾನ -Vishwanews24

ನವದೆಹಲಿ: ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಫ್ರಾನ್ಸ್​ ಮೂಲದ ರಫೇಲ್​​ ಯುದ್ಧ ವಿಮಾನ ಭಾರತಕ್ಕೆ ಆಗಮಿಸಲಿವೆ. ಮುಂದಿನ ತಿಂಗಳು ವಿದೇಶದಿಂದ ಆಗಮಿಸಲಿರುವ 36 ರಫೇಲ್​​ ಯುದ್ದ ವಿಮಾನಗಳನ್ನು ಭಾರತೀಯ ವಾಯುಪಡೆ ಸ್ವಾಗತಿಸಲಿದೆ. ಈ ಮುನ್ನವೇ ಫ್ರಾನ್ಸ್​ ಪ್ರಧಾನಿ ಜೊತೆಗೆ ಮಾತುಕತೆ ನಡೆಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ಪ್ಯಾರಿಸ್​​ಗೆ ತೆರಳಲಿದ್ದಾರೆ ಎನ್ನಲಾಗಿದೆ.

ಫ್ರಾನ್ಸ್​​ ಸರ್ಕಾರ ಮುಂದಿನ ತಿಂಗಳು ರಫೇಲ್​​ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರ ಮಾಡಲಿದೆ. ಇದಕ್ಕಾಗಿಯೇ ಸೆಪ್ಟೆಂಬರ್​​​​ 20ಕ್ಕೆ ವಿಮಾನ ಹಸ್ತಾಂತರ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇದೇ ಸಮಾರಂಭದಲ್ಲಿ ಫ್ರಾನ್ಸ್​​ನ ಡಸ್ಸೌಲ್ಟ್ ಎಂಬುವರು, ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಉಪಸ್ಥಿತಿಯಲ್ಲಿ ಭಾರತಕ್ಕೆ ರಫೆಲ್ ಯುದ್ಧ ವಿಮಾನ ಹಸ್ತಾಂತರ ಮಾಡಲಿದ್ದಾರೆ.

ಜಾಹಿರಾತು

ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಸಂಬಂಧ ಮುಂದಿನ ಗುರುವಾರ ಪ್ಯಾರಿಸ್​​ಗೆ ಭೇಟಿ ನೀಡಲಿದ್ದಾರೆ. ಅಲ್ಲಿನ  ಭಾರತೀಯ ವಾಯುಸೇನೆ ಅಧಿಕಾರಿಗಳ ಜೊತೆಗೆ ಹಸ್ತಾಂತರ ಪ್ರಕ್ರಿಯೆ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.

ಸುಮಾರು 58 ಸಾವಿರ ಕೋಟಿ ರೂಪಾಯಿ ವೆಚ್ಚದ 36 ರಫೆಲ್ ಯುದ್ಧ ವಿಮಾನ ಖರೀದಿಗೆ ಭಾರತ ಸರ್ಕಾರ 2016ರ ಸೆಪ್ಟೆಂಬರ್ ನಲ್ಲಿ ಫ್ರಾನ್ಸ್ ಸರ್ಕಾರದೊಂದಿಗೆ ಅಂತರ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago