Featured

ಭಾರತಕ್ಕೆ ಆಗಮಿಸಿದ ಬ್ರಿಟನ್ ಪ್ರಧಾನಿ ಜಾನ್ಸನ್‌ ; ಗುಜರಾತ್‌ನ ಸಬರಮತಿ ಆಶ್ರಮಕ್ಕೆ ಭೇಟಿ – Vishwanews24

ಭಾರತಕ್ಕೆ ಆಗಮಿಸಿದ ಬ್ರಿಟನ್ ಪ್ರಧಾನಿ ಜಾನ್ಸನ್‌ ; ಗುಜರಾತ್‌ನ ಸಬರಮತಿ ಆಶ್ರಮಕ್ಕೆ ಭೇಟಿ – Vishwanews24

ಅಹಮದಾಬಾದ್ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಅವರು ಇಂದು ಬೆಳಗ್ಗೆ ಅಹಮದಾಬಾದ್‍ಗೆ ಆಗಮಿಸಿದ ಸಂದರ್ಭದಲ್ಲಿ ಭವ್ಯ ಸ್ವಾಗತ ನೀಡಲಾಗಿದೆ .

ವಿಮಾನ ನಿಲ್ದಾಣದಿಂದ ಸುಮಾರು ನಾಲ್ಕು ಕಿಮೀ ಮಾರ್ಗದಲ್ಲಿ ಪುಷ್ಪ ಮಳೆಗೆರೆದು ಸಾಂಸ್ಕøತಿಕ ಕಲಾ ತಂಡ ಮೇಳ್ಯಸಿದೆ , ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಜಾನ್ಸನ್ ಅವರನ್ನು ಬರಮಾಡಿಕೊಂಡರು.

ರಸ್ತೆ ಯುದ್ದಕ್ಕೂ ಸಾಂಪ್ರದಾಯಿಕ ಗುಜರಾತಿನ ನೃತ್ಯಗಳು ಮತ್ತು ಸಂಗೀತವನ್ನು ಪ್ರದರ್ಶಿಸುವ ತಂಡಗಳಿಂದ ಬ್ರಿಟಿಷ್ ಪ್ರಧಾನಿ ಅವರನ್ನು ಸ್ವಾಗತಿಸಲಾಯಿತು. ಆಶ್ರಮ ರಸ್ತೆಯ ಪಂಚತಾರಾ ಹೋಟೆಲ್‍ಗೆ ನಾಲ್ಕು ಕಿಮೀ ವ್ಯಾಪ್ತಿಯಲ್ಲಿ ನಿಯಮಿತ ಮಧ್ಯಂತರದಲ್ಲಿ 40 ವೇದಿಕೆಗಳನ್ನು ನಿರ್ಮಿಸಲಾಯಿತು, ಅಲ್ಲಿ ತಂಡಗಳು ಮತ್ತೆ ಸಾಂಪ್ರದಾಯಿಕ ಭಾರತೀಯ ನೃತ್ಯಗಳನ್ನು ಪ್ರದರ್ಶಿಸಿ ಜಾನ್ಸನ್‌ಅವರನ್ನು ಸ್ವಾಗತಿಸಿದರು.

ನಂತರ ಬ್ರಿಟನ್ ಪ್ರಧಾನಿಯವರು ರಾಜ್ಯದ ಪ್ರಮುಖ ಉದ್ಯಮಿಗಳ ಜೊತೆ ಸಭೆ ನಡೆಸಿದರು, ನಂತರ, ಅವರು ಪಂಚಮಹಲ್ ಜಿಲ್ಲಾಯ ಹಲೋಲ್ ಬಳಿಯ ಬ್ರಿಟಿಷ್ ನಿರ್ಮಾಣ ಸಲಕರಣೆಗಳ ಸಂಸ್ಥೆಯಾದ ಜೆಸಿಬಿಯ ಉತ್ಪಾದನಾ ಘಟಕಕ್ಕೆ ಬೇಟಿ ನೀಡಿದರು . ಬ್ರಿಟಿಷ್ ಪ್ರಧಾನಿ ಗಾಂಧಿನಗರದಲ್ಲಿನ ನಿರ್ಮಾಣ ಹಂತದಲ್ಲಿರುವ ಗುಜರಾತ್ ಬಯೋಟೆಕ್ನಾಲಜಿ ವಿಶ್ವವಿದ್ಯಾಲಯದ ಕ್ಯಾಂಪಸ್‍ಗೂ ಭೇಟಿ ನೀಡಲಿದ್ದಾರೆ.

ನವದೆಹಲಿಗೆ ತೆರಳುವ ಮೊದಲು ಗಾಂಧಿನಗರದಲ್ಲಿರುವ ಸ್ವಾಮಿನಾರಾಯಣ ಪಂಥದ ಪ್ರಸಿದ್ಧ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ದೆಹಲಿಯಲ್ಲಿ ಜಾನ್ಸನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

ಸಬರಮತಿ ಆಶ್ರಮದಲ್ಲಿ ಜಾನ್ಸನ್
ಸಬರಮತಿ ಆಶ್ರಮಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿದ ಬೋರಿಸ್ ಜಾನ್ಸನ್ ಅವರು, ಚರಕವನ್ನು ತಿರುಗಿಸಿ ನೂಲು ತೆಗೆಯಲು ಪ್ರಯತ್ನಿಸಿದರು. ಬಳಿಕ ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಅವರು ಮಹಾತ್ಮ ಗಾಂಧಿ ಅವರನ್ನು ಸ್ಮರಿಸಿ ಅಭಿಪ್ರಾಯ ಬರೆದರು. “ಈ ಅಸಾಧಾರಣ ವ್ಯಕ್ತಿಯ ಆಶ್ರಮಕ್ಕೆ ಬಂದಿರುವುದು ಹಾಗೂ ಅವರು ಜಗತ್ತಿನ ಒಳಿತಿಗಾಗಿ ಪರಿವರ್ತನೆ ತರಲು ಸತ್ಯ ಮತ್ತು ಅಹಿಂಸೆಯ ಸರಳ ತತ್ವಗಳನ್ನು ಹೇಗೆ ಜತೆಗೂಡಿಸಿದರು ಎಂದು ಅರ್ಥ ಮಾಡಿಕೊಳ್ಳಲು ಬಂದಿರುವುದು ಬಹಳ ಖುಷಿಯ ಸಂಗತಿ” ಎಂದು ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

16 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

16 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

16 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

17 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

17 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

18 hours ago