Featured

ಭಾರತಕ್ಕೆ ಕುಮಾರಸ್ವಾಮಿಯಂತಹ ‘ದುರಂತ ನಾಯಕ’ನ ಅಗತ್ಯವಿಲ್ಲ ; ಮೋದಿಯಂತಹ ನಿರ್ಣಾಯಕ, ನಿಖರ ನಾಯಕನ ಅಗತ್ಯವಿದೆ : ಜೇಟ್ಲಿ

ಹೊಸದಿಲ್ಲಿ: ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ರವಿವಾರ ಸುದ್ದಿಗೋಷ್ಟಿಯಲ್ಲಿ ಭಾವೋದ್ವೇಗದಿಂದ ಕಣ್ಣೀರು ಹಾಕಿರುವುದನ್ನು ಟೀಕಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, ದೇಶಕ್ಕೆ ಕುಮಾರಸ್ವಾಮಿಯಂತಹ ದುರಂತ ನಾಯಕನಲ್ಲ, ಮೋದಿಯಂತಹ ನಿರ್ಣಾಯಕ, ನಿಖರ ನಾಯಕನ ಅಗತ್ಯವಿದೆ ಎಂದಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರದ ವಿರುದ್ಧ ಟೀಕಾಪ್ರಹಾರ ಮಾಡಿರುವ ಜೇಟ್ಲಿ, ಇಂತಹ ಅವಕಾಶವಾದಿ ಒಕ್ಕೂಟದ ಮುಖ್ಯ ಉದ್ದೇಶ ದೇಶಕ್ಕೆ ಸೇವೆ ಸಲ್ಲಿಸುವುದಲ್ಲ, ಅಸ್ತಿತ್ವ ಉಳಿಸಿಕೊಳ್ಳುವುದಾಗಿದೆ ಎಂದಿದ್ದಾರೆ. ರವಿವಾರ ಮಾತನಾಡಿದ್ದ ಕುಮಾರಸ್ವಾಮಿ, ಸಮ್ಮಿಶ್ರ ಸರಕಾರವನ್ನು ಮುನ್ನಡೆಸುವ ಭಾರವನ್ನು ವಿಷವನ್ನು ನುಂಗಿಕೊಂಡಿರುವ ಶಿವನ ಪರಿಸ್ಥಿತಿಗೆ ಹೋಲಿಸಿದ್ದರು. ಇದಕ್ಕೆ ಪ್ರತಿಯಾಗಿ ಫೇಸ್‌ಬುಕ್‌ನಲ್ಲಿ ಹೇಳಿಕೆ ಪೋಸ್ಟ್‌ಮಾಡಿರುವ ಜೇಟ್ಲಿ, ಕಾಂಗ್ರೆಸ್ ಪಕ್ಷ ಈ ಹಿಂದೆ ಚರಣ್ ಸಿಂಗ್, ಚಂದ್ರಶೇಖರ್, ಎಚ್.ಡಿ.ದೇವೇಗೌಡ, ಐ.ಕೆ..ಗುಜ್ರಾಲ್‌ರಿಗೆ ಮಾಡಿರುವುದನ್ನು ಕರ್ನಾಟಕದಲ್ಲಿ ಪುನರಾವರ್ತಿಸಲಿದೆ . ಮೋದಿಯನ್ನು ಹೊರಗಿಡುವುದು ಈ ಅವಕಾಶವಾದಿ ಒಕ್ಕೂಟದ ಏಕೈಕ ಅಜೆಂಡಾವಾಗಿದೆ ಎಂದು ತಿಳಿಸಿದ್ದಾರೆ.

ಸೈದ್ಧಾಂತಿಕ ಭಿನ್ನತೆಯಿರುವ ಪಕ್ಷಗಳ ಸಮ್ಮಿಶ್ರ ಸರಕಾರ ದೇಶವನ್ನು ಮುನ್ನಡೆಸಲು ಯೋಗ್ಯವಲ್ಲ ಎಂದ ಜೇಟ್ಲಿ, ಇಂತಹ ಸಮ್ಮಿಶ್ರ ಸರಕಾರ ವಿಷದ ಬಾಟಲಿ ಎಂದಾದರೆ ಅದನ್ನು ದೇಶದ ಮೇಲೆ ಹೊರಿಸುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು. ವಿಶ್ವದ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಅರ್ಥವ್ಯವಸ್ಥೆಯ ನಾಯಕ ಬಡಪಾಯಿಯಾಗಿರಬಾರದು ಎಂದ ಜೇಟ್ಲಿ, ಭಯೋತ್ಪಾದನೆಯನ್ನು ಮಟ್ಟಹಾಕುವಲ್ಲಿ ಓಟ್‌ಬ್ಯಾಂಕ್ ರಾಜಕೀಯ ಅಡ್ಡಿಯಾಗಬಾರದು ಎಂದರು. ಸಮ್ಮಿಶ್ರ ಸರಕಾರದ ಮಿತ್ರಪಕ್ಷಗಳ ಒತ್ತಡಕ್ಕೆ ಮಣಿಯುವ ಸರಕಾರ ದೇಶಕ್ಕೆ ಅಂಟಿದ ಶಾಪ ಹಾಗೂ ಹೊರೆಯಾಗಿದೆ ಎಂದು ಜೇಟ್ಲಿ ಹೇಳಿದರು. ಇಂತಹ ಒಕ್ಕೂಟದ ಮುಖಂಡ ಕ್ಯಾಮೆರಾದ ಎದುರು ಅತ್ತು ಕಣ್ಣೀರುಗರೆಯುವುದು, ಹೊಣೆಯಿಂದ ಮುಕ್ತನಾಗಲು ಬಯಸಿರುವುದಾಗಿ ಹೇಳುವುದು ಯುಪಿಎ-2 ಸರಕಾರದ ಆಡಳಿತಾವಧಿಯಲ್ಲಿದ್ದ ನಿಷ್ಕ್ರಿಯ ಸ್ಥಿತಿಗಿಂತಲೂ ಹೀನ ಸನ್ನಿವೇಶವಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ವಂಶಾಧಿಕಾರ ಪದ್ಧತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಟೀಕಿಸಿದ ಅವರು, ಕೇವಲ ಒಂದು ಕುಟುಂಬದವರು ಮಾತ್ರ ದೇಶವನ್ನು ಆಳಬೇಕು ಎಂಬುದು ಕಾಂಗ್ರೆಸ್‌ನ ಇರಾದೆಯಾಗಿದೆ. ಯಾರಾದರೂ ಇತರರು ಅವಕಾಶ ಪಡೆದರೆ, ಅಂತವರು ಕೈಚೆಲ್ಲಿ ಸಾರ್ವಜನಿಕವಾಗಿ ಅಳುವಂತಹ ಹತಾಶ ಸ್ಥಿತಿಗೆ ಅವರನ್ನು ನೂಕಲಾಗುತ್ತದೆ ಎಂದಿದ್ದಾರೆ.

Vishwa News 24

Recent Posts

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

10 minutes ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

14 minutes ago

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

30 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

52 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

21 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago