Featured

ಭಾರತಕ್ಕೆ ಗಡೀಪಾರು ಆದೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ : ನೀರವ್ ಮೋದಿ -Vishwanews24

ಲಂಡನ್: ಜೈಲಿನಲ್ಲಿರುವಾಗ ನನ್ನ ಮೇಲೆ ಮೂರು ಬಾರಿ ಹಲ್ಲೆಗೊಳಗಾಗಿದ್ದು, ಭಾರತಕ್ಕೆ ಗಡೀಪಾರು ಆದೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದರೂ ಕೂಡ ಇಂಗ್ಲೆಂಡಿನ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದ್ದಾರೆ ಎಂದು ಕಾರಾಗೃಹದಲ್ಲಿರುವ ವಜ್ರೋದ್ಯಮಿ ನೀರವ್ ಮೋದಿ ಹೇಳಿದ್ದಾರೆ.

49 ವರ್ಷದ ನೀರವ್ ಮೋದಿ ವೆಸ್ಟ್ ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ನಿನ್ನೆ ತಮ್ಮ ಬ್ಯಾರಿಸ್ಟರ್ ಹುಗೊ ಕೈತ್ ಕ್ಯುಸಿ ಅವರೊಂದಿಗೆ ಹಾಜರಾಗಿ 5ನೇ ಬಾರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು.

ಕಳೆದ ಏಪ್ರಿಲ್ ನಲ್ಲಿ ಮತ್ತು ಕಳೆದ ಮಂಗಳವಾರ ವಂಡ್ಸ್ ವರ್ತ್ ಜೈಲಿನಲ್ಲಿ ನೀರವ್ ಮೋದಿ ವಿರುದ್ಧ ಸಹ ಕೈದಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದಾಗ ಜೈಲಿನ ಸೇವಾ ಸಿಬ್ಬಂದಿ ಸೂಕ್ತವಾಗಿ ಪ್ರತಿಕ್ರಿಯಿಸಿಲ್ಲ, ತಮಗೆ ಕೌನ್ಸಿಲರ್ ಒದಗಿಸುವಂತೆ ನೀರವ್ ಮಾಡಿದ್ದ ಮನವಿಯನ್ನು ಕೂಡ ತಿರಸ್ಕರಿಸಲಾಗಿದೆ ಎಂದು ಅವರ ಪರ ನ್ಯಾಯಾಧೀಶರು ಹೇಳಿದ್ದಾರೆ.

ಪ್ರಸ್ತುತ ಲಂಡನ್ ಜೈಲಿನಲ್ಲಿರುವ ನೀರವ್ ಆರ್ಥಿಕ ಅಪರಾಧ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವೆಸ್ಟ್‍ಮಿನಿಸ್ಟರ್ ಮ್ಯಾಜಿಸ್ಟೇಟ್ ಕೋರ್ಟ್ ನಿನ್ನೆ ಮತ್ತೊಮ್ಮೆ ತಿರಸ್ಕರಿಸಿತು.  ತಮ್ಮ ವಕೀಲ ಹ್ಯೂಗೋ ಕೀಥ್ ಕ್ಯೂಸಿ ಮೂಲಕ ನೀರವ್ ಜಾಮೀನು ಮಂಜೂರಾತಿಗಾಗಿ ಐದನೇ ಬಾರಿ ಅರ್ಜಿ ಸಲ್ಲಿಸಿದ್ದ.

ನೀರವ್ ಮೋದಿಗೆ ವ್ಯಾಂಡ್ಸ್‍ವರ್ಥ್ ಬಂಧೀಖಾನೆಯಲ್ಲಿ ಕೈದಿಗಳು ಮೂರು ಬಾರಿ ಹಲ್ಲೆ ನಡೆಸಿದ್ದಾರೆ. ತಮ್ಮ ಕಕ್ಷಿದಾರನಿಗೆ ರಕ್ಷಣೆ ನೀಡುವಲ್ಲಿ ಜೈಲಿನ ಸಿಬ್ಬಂದಿ ವಿಫಲರಾಗಿದ್ದಾರೆ. ಸೆರೆಮನೆಯಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.  ಕೋರ್ಟ್‍ಗೆ ಸಲ್ಲಿಸಿರುವ ಮನವಿಯಲ್ಲಿ ನೀರವ್ ತನ್ನನ್ನು ಭಾರತಕ್ಕೆ ಗಡೀಪಾರು ಮಾಡಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳಿದ್ದಾನೆ.

ಮೂಂದಿನ ವರ್ಷ ಮೇ 11 ರಿಂದ 15ರವರೆಗೆ ಕಳಂಕಿತ ಉದ್ಯಮಿಯನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಅಂತಿಮ ವಿಚಾರಣೆ ನಡೆಸುವ ತೀರ್ಪು ಹೊರ ಬೀಳಲಿದೆ. ಅದಕ್ಕೆ ಮುನ್ನವೇ ವಜ್ರ ವ್ಯಾಪಾರಿ ಸಾವಿಗೆ ಶರಣಾಗುವ ಬೆದರಿಕೆ ಹಾಕುತ್ತಿದ್ದಾನೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

6 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

6 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

7 hours ago