Featured

ಭಾರತಕ್ಕೆ ಗಡೀಪಾರು ಆದೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ : ನೀರವ್ ಮೋದಿ -Vishwanews24

ಲಂಡನ್: ಜೈಲಿನಲ್ಲಿರುವಾಗ ನನ್ನ ಮೇಲೆ ಮೂರು ಬಾರಿ ಹಲ್ಲೆಗೊಳಗಾಗಿದ್ದು, ಭಾರತಕ್ಕೆ ಗಡೀಪಾರು ಆದೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದರೂ ಕೂಡ ಇಂಗ್ಲೆಂಡಿನ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದ್ದಾರೆ ಎಂದು ಕಾರಾಗೃಹದಲ್ಲಿರುವ ವಜ್ರೋದ್ಯಮಿ ನೀರವ್ ಮೋದಿ ಹೇಳಿದ್ದಾರೆ.

49 ವರ್ಷದ ನೀರವ್ ಮೋದಿ ವೆಸ್ಟ್ ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ನಿನ್ನೆ ತಮ್ಮ ಬ್ಯಾರಿಸ್ಟರ್ ಹುಗೊ ಕೈತ್ ಕ್ಯುಸಿ ಅವರೊಂದಿಗೆ ಹಾಜರಾಗಿ 5ನೇ ಬಾರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು.

ಕಳೆದ ಏಪ್ರಿಲ್ ನಲ್ಲಿ ಮತ್ತು ಕಳೆದ ಮಂಗಳವಾರ ವಂಡ್ಸ್ ವರ್ತ್ ಜೈಲಿನಲ್ಲಿ ನೀರವ್ ಮೋದಿ ವಿರುದ್ಧ ಸಹ ಕೈದಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದಾಗ ಜೈಲಿನ ಸೇವಾ ಸಿಬ್ಬಂದಿ ಸೂಕ್ತವಾಗಿ ಪ್ರತಿಕ್ರಿಯಿಸಿಲ್ಲ, ತಮಗೆ ಕೌನ್ಸಿಲರ್ ಒದಗಿಸುವಂತೆ ನೀರವ್ ಮಾಡಿದ್ದ ಮನವಿಯನ್ನು ಕೂಡ ತಿರಸ್ಕರಿಸಲಾಗಿದೆ ಎಂದು ಅವರ ಪರ ನ್ಯಾಯಾಧೀಶರು ಹೇಳಿದ್ದಾರೆ.

ಪ್ರಸ್ತುತ ಲಂಡನ್ ಜೈಲಿನಲ್ಲಿರುವ ನೀರವ್ ಆರ್ಥಿಕ ಅಪರಾಧ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವೆಸ್ಟ್‍ಮಿನಿಸ್ಟರ್ ಮ್ಯಾಜಿಸ್ಟೇಟ್ ಕೋರ್ಟ್ ನಿನ್ನೆ ಮತ್ತೊಮ್ಮೆ ತಿರಸ್ಕರಿಸಿತು.  ತಮ್ಮ ವಕೀಲ ಹ್ಯೂಗೋ ಕೀಥ್ ಕ್ಯೂಸಿ ಮೂಲಕ ನೀರವ್ ಜಾಮೀನು ಮಂಜೂರಾತಿಗಾಗಿ ಐದನೇ ಬಾರಿ ಅರ್ಜಿ ಸಲ್ಲಿಸಿದ್ದ.

ನೀರವ್ ಮೋದಿಗೆ ವ್ಯಾಂಡ್ಸ್‍ವರ್ಥ್ ಬಂಧೀಖಾನೆಯಲ್ಲಿ ಕೈದಿಗಳು ಮೂರು ಬಾರಿ ಹಲ್ಲೆ ನಡೆಸಿದ್ದಾರೆ. ತಮ್ಮ ಕಕ್ಷಿದಾರನಿಗೆ ರಕ್ಷಣೆ ನೀಡುವಲ್ಲಿ ಜೈಲಿನ ಸಿಬ್ಬಂದಿ ವಿಫಲರಾಗಿದ್ದಾರೆ. ಸೆರೆಮನೆಯಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.  ಕೋರ್ಟ್‍ಗೆ ಸಲ್ಲಿಸಿರುವ ಮನವಿಯಲ್ಲಿ ನೀರವ್ ತನ್ನನ್ನು ಭಾರತಕ್ಕೆ ಗಡೀಪಾರು ಮಾಡಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳಿದ್ದಾನೆ.

ಮೂಂದಿನ ವರ್ಷ ಮೇ 11 ರಿಂದ 15ರವರೆಗೆ ಕಳಂಕಿತ ಉದ್ಯಮಿಯನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಅಂತಿಮ ವಿಚಾರಣೆ ನಡೆಸುವ ತೀರ್ಪು ಹೊರ ಬೀಳಲಿದೆ. ಅದಕ್ಕೆ ಮುನ್ನವೇ ವಜ್ರ ವ್ಯಾಪಾರಿ ಸಾವಿಗೆ ಶರಣಾಗುವ ಬೆದರಿಕೆ ಹಾಕುತ್ತಿದ್ದಾನೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

14 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

17 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

17 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago