Featured

ಭಾರತಕ್ಕೆ ಬಿಗ್‌ ಶಾಕ್‌ : ವಿನೇಶ್ ಫೋಗಟ್​ ಅನರ್ಹ; ಕೈತಪ್ಪಿದ ಒಲಿಂಪಿಕ್ಸ್ ಪದಕ – vishwanews24

ಭಾರತಕ್ಕೆ ಬಿಗ್‌ ಶಾಕ್‌ –  ವಿನೇಶ್ ಫೋಗಟ್​ ಅನರ್ಹ; ಕೈತಪ್ಪಿದ ಒಲಿಂಪಿಕ್ಸ್ ಪದಕ

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಫೋಗಟ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ ಎಂದು ಐಒಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಫೈನಲ್ ಸ್ಪರ್ಧೆಗೂ ಮುನ್ನ ವಿನೇಶ್ ಫೋಗಟ್ ಅನರ್ಹಗೊಂಡಿರುವುದರಿಂದಾಗಿ ಇದೀಗ 50 ಕೆ.ಜಿ. ವಿಭಾಗದಲ್ಲಿ ಯಾವುದೇ ಕುಸ್ತಿಪಟು ಬೆಳ್ಳಿ ಪದಕ ಪಡೆಯಲು ಸಾಧ್ಯವಾಗುವುದಿಲ್ಲ. ಉಳಿದಂತೆ ಈ ವಿಭಾಗದಲ್ಲಿ ವಿನೇಶ್ ಅವರೊಂದಿಗೆ ಫೈನಲ್​ನಲ್ಲಿ ಸ್ಪರ್ಧಿಸಬೇಕಿದ್ದ ಅಮೆರಿಕದ ಕುಸ್ತಿಪಟುಗೆ ಚಿನ್ನದ ಪದಕ ಸಿಗಲಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago