Featured

ಭಾರತಕ್ಕೆ ಬಿಗ್‌ ಶಾಕ್‌ : ವಿನೇಶ್ ಫೋಗಟ್​ ಅನರ್ಹ; ಕೈತಪ್ಪಿದ ಒಲಿಂಪಿಕ್ಸ್ ಪದಕ – vishwanews24

ಭಾರತಕ್ಕೆ ಬಿಗ್‌ ಶಾಕ್‌ –  ವಿನೇಶ್ ಫೋಗಟ್​ ಅನರ್ಹ; ಕೈತಪ್ಪಿದ ಒಲಿಂಪಿಕ್ಸ್ ಪದಕ

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಫೋಗಟ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ ಎಂದು ಐಒಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಫೈನಲ್ ಸ್ಪರ್ಧೆಗೂ ಮುನ್ನ ವಿನೇಶ್ ಫೋಗಟ್ ಅನರ್ಹಗೊಂಡಿರುವುದರಿಂದಾಗಿ ಇದೀಗ 50 ಕೆ.ಜಿ. ವಿಭಾಗದಲ್ಲಿ ಯಾವುದೇ ಕುಸ್ತಿಪಟು ಬೆಳ್ಳಿ ಪದಕ ಪಡೆಯಲು ಸಾಧ್ಯವಾಗುವುದಿಲ್ಲ. ಉಳಿದಂತೆ ಈ ವಿಭಾಗದಲ್ಲಿ ವಿನೇಶ್ ಅವರೊಂದಿಗೆ ಫೈನಲ್​ನಲ್ಲಿ ಸ್ಪರ್ಧಿಸಬೇಕಿದ್ದ ಅಮೆರಿಕದ ಕುಸ್ತಿಪಟುಗೆ ಚಿನ್ನದ ಪದಕ ಸಿಗಲಿದೆ.

Vishwa News 24

Recent Posts

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 minutes ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

13 minutes ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

26 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

34 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

54 minutes ago

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

1 hour ago