ಯಾದಗಿರಿ : ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರೇ ಕಾಂಗ್ರೆಸ್ ನವರು, ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯೂ ಸತ್ತಿಲ್ಲ. ಇಂಥವರು ನಮಗೆ ದೇಶಭಕ್ತಿಯ ಪಾಠ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಖರ್ಗೆ, ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಮೋದಿ ಇನ್ನೂ ಹುಟ್ಟಿರಲಿಲ್ಲ, ದೇಶದ ಸ್ವಾತಂತ್ರ್ಯದ ಬಗ್ಗೆ ಮೋದಿಗಿಂತ ಹೆಚ್ಚು ನನಗೆ ಗೊತ್ತು, ಮೋದಿ ನನಗಿಂತ ವಯಸ್ಸಿನಲ್ಲಿ ಚಿಕ್ಕವನು, ನಾನು ಕೆಲಸ ಮಾಡಿ ಮತ ಕೇಳುತ್ತಿದ್ದೇನೆ, ಬೇರೆಯವರ ತರಹ ಉಡಾಫೆಯಾಗಿ ಮತ ಕೇಳುತ್ತಿಲ್ಲ ಎಂದಿದ್ದಾರೆ.
ಇನ್ನು ಬಿಜೆಪಿ ಸೇರಿರುವ ಬಾಬುರಾವ್ ಚಿಂಚನಸೂರ, ಎ.ಬಿ. ಮಾಲಕ ರೆಡ್ಡಿ, ಉಮೇಶ್ ಜಾಧವ್ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಈ ಹಿಂದೆ ನನ್ನನ್ನು ಇಂದ್ರ, ಚಂದ್ರ ಅಂದವರೇ ನನ್ನನ್ನು ಬೈಯುತ್ತಿದ್ದಾರೆ. ಹಳ್ಳಿಯಿಂದ ದಿಲ್ಲಿವರೆಗೆ ನನಗೆ ಸೋಲಿಸಲು ಸಂಚು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ನನ್ನನ್ನು ಸೋಲಿಸಲು ಸೋತವರು ಸಂಘ ಮಾಡಿಕೊಂಡಿದ್ದಾರೆ. ಅವರೇ ಗೆದ್ದಿಲ್ಲ, ಇನ್ನು ನನ್ನನ್ನು ಸೋಲಿಸಲು ಸಾಧ್ಯವಾ? ಎಂದು ಟೀಕಿಸಿದ್ದಾರೆ.
ಕೆಲವರು ಕುಣಿದು ಕುಣಿದು ಮಾತನಾಡಬಹುದು. ಕುಣಿಯೋರಿಂದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಾಬುರಾವ್ ಚಿಂಚನಸೂರು ಕುರಿತು ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…