ಯಾದಗಿರಿ : ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರೇ ಕಾಂಗ್ರೆಸ್ ನವರು, ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯೂ ಸತ್ತಿಲ್ಲ. ಇಂಥವರು ನಮಗೆ ದೇಶಭಕ್ತಿಯ ಪಾಠ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಖರ್ಗೆ, ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಮೋದಿ ಇನ್ನೂ ಹುಟ್ಟಿರಲಿಲ್ಲ, ದೇಶದ ಸ್ವಾತಂತ್ರ್ಯದ ಬಗ್ಗೆ ಮೋದಿಗಿಂತ ಹೆಚ್ಚು ನನಗೆ ಗೊತ್ತು, ಮೋದಿ ನನಗಿಂತ ವಯಸ್ಸಿನಲ್ಲಿ ಚಿಕ್ಕವನು, ನಾನು ಕೆಲಸ ಮಾಡಿ ಮತ ಕೇಳುತ್ತಿದ್ದೇನೆ, ಬೇರೆಯವರ ತರಹ ಉಡಾಫೆಯಾಗಿ ಮತ ಕೇಳುತ್ತಿಲ್ಲ ಎಂದಿದ್ದಾರೆ.
ಇನ್ನು ಬಿಜೆಪಿ ಸೇರಿರುವ ಬಾಬುರಾವ್ ಚಿಂಚನಸೂರ, ಎ.ಬಿ. ಮಾಲಕ ರೆಡ್ಡಿ, ಉಮೇಶ್ ಜಾಧವ್ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಈ ಹಿಂದೆ ನನ್ನನ್ನು ಇಂದ್ರ, ಚಂದ್ರ ಅಂದವರೇ ನನ್ನನ್ನು ಬೈಯುತ್ತಿದ್ದಾರೆ. ಹಳ್ಳಿಯಿಂದ ದಿಲ್ಲಿವರೆಗೆ ನನಗೆ ಸೋಲಿಸಲು ಸಂಚು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ನನ್ನನ್ನು ಸೋಲಿಸಲು ಸೋತವರು ಸಂಘ ಮಾಡಿಕೊಂಡಿದ್ದಾರೆ. ಅವರೇ ಗೆದ್ದಿಲ್ಲ, ಇನ್ನು ನನ್ನನ್ನು ಸೋಲಿಸಲು ಸಾಧ್ಯವಾ? ಎಂದು ಟೀಕಿಸಿದ್ದಾರೆ.
ಕೆಲವರು ಕುಣಿದು ಕುಣಿದು ಮಾತನಾಡಬಹುದು. ಕುಣಿಯೋರಿಂದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಾಬುರಾವ್ ಚಿಂಚನಸೂರು ಕುರಿತು ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…