Featured

ಭಾರತಕ್ಕೆ 5ನೇ ಬಂಗಾರ ಗೆದ್ದು ವಿನೂತನ ದಾಖಲೆ ನಿರ್ಮಿಸಿದ ಚಿನ್ನದ ಹುಡುಗಿ ಹಿಮಾ ದಾಸ್ -Vishwanews24

ನವದೆಹಲಿ: ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಗೆದ್ದು ಪದಕ ಪಡೆಯುವ ಮೂಲಕ 15 ದಿನಗಳಲ್ಲಿ ಹಿಮಾ ದಾಸ್ 5 ಚಿನ್ನದ ಪದಕೆ ಗೆದ್ದು ವಿನೂತನ ದಾಖಲೆ ನಿರ್ಮಿಸಿದ್ದಾರೆ.
ಝೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಹಿಳಾ ವಿಭಾಗದ 400 ಮೀ. ಓಟವನ್ನು ಹಿಮಾ ದಾಸ್ ಕೇವಲ 52.09 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸಿದ್ದು ಈ ಆವೃತ್ತಿ (ಸೀಸನ್) ನ ಅತ್ಯುತ್ತಮ ಕಾಲಾವಧಿ ಎಂಬ ದಾಖಲೆಗೆ ಪಾತ್ರವಾಗಿದೆ.
ಜುಲೈ 2 ರಂದು ಪೋಲೆಂಡ್‌ನಲ್ಲಿ ನಡೆದಿದ್ದ ಪೋಜ್ನಾನ್ ಅಥ್ಲೆಟಿಕ್ಸ್ ಗ್ರ್ಯಾನ್ ಪ್ರಿ ಕೂಟದ 200 ಮೀ. ಸ್ಪರ್ಧೆ ಯಲ್ಲಿ ಹಿಮಾ 23.65 ಸೆ.ಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದಿದ್ದರು. ಬಳಿಕ ಜು.7 ರಂದು ಪೋಲೆಂಡ್‌ನಲ್ಲಿ ನಡೆದಿದ್ದ ಕುಟ್ನೋ ಅಥ್ಲೆಟಿಕ್ಸ್ ಕೂಟದ 200 ಮೀ. ಓಟದಲ್ಲಿ ಹಿಮಾ ದಾಸ್ 23.97 ಸೆ.ಗಳಲ್ಲಿ ಗುರಿ ಯನ್ನು ಪೂರ್ಣಗೊಳಿಸಿ ಚಿನ್ನದ ಪದಕ ಜಯಿಸಿದ್ದರು.
ನಂತರ ಜು. 13 ರಂದು ಜೆಕ್ ಗಣರಾಜ್ಯದಲ್ಲಿ ನಡೆದಿದ್ದ ಕ್ಲಾಡ್ನೋ ಅಥ್ಲೆಟಿಕ್ಸ್ ಕೂಟದ 200 ಮೀ. ಸ್ಪರ್ಧೆ ಯಲ್ಲಿ 23.43 ಸೆ.ಗಳಲ್ಲಿ ಗುರಿ ಮುಟ್ಟಿ ಹಿಮಾ 3ನೇ ಚಿನ್ನ ಜಯಿಸಿದ್ದರು. ಜು.17 ರಂದು ಜೆಕ್ ಗಣರಾಜ್ಯ ದಲ್ಲಿ ನಡೆದಿದ್ದ ಟಬೂರ್ ಗ್ರ್ಯಾನ್ ಪ್ರಿ ಅಥ್ಲೆಟಿಕ್ಸ್ ಕೂಟದ 200 ಮೀ. ಓಟದಲ್ಲಿ 23.25 ಸೆ.ಗಳಲ್ಲಿ ಗುರಿ ತಲುಪಿ ಚಿನ್ನ ಜಯಿಸಿದರು. ಇದು ಕೂಡ ಕೇವಲ 15 ದಿನಗಳಲ್ಲಿ 4 ಚಿನ್ನ ಗೆದ್ದ ಸಾಧನೆಯನ್ನು ಹಿಮಾ ಮಾಡಿದ್ದರು.

ಇದರಲ್ಲಿ ಹಿಮಾ ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್ ಕೂಟದಲ್ಲಿ 3 ಚಿನ್ನ, ಪೋಲೆಂಡ್‌ನಲ್ಲಿ 2 ಚಿನ್ನ ಗೆದ್ದಿದ್ದಾರೆ. ಈ ಋತುವಿನಲ್ಲಿ ಹಿಮಾ ದಾಸ್ 400 ಮೀ. ಓಟದಲ್ಲಿ ಮೊದಲ ಚಿನ್ನ ಗೆದ್ದಿದ್ದಾರೆ..

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago