Featured

ಭಾರತಕ್ಕೆ 5ನೇ ಬಂಗಾರ ಗೆದ್ದು ವಿನೂತನ ದಾಖಲೆ ನಿರ್ಮಿಸಿದ ಚಿನ್ನದ ಹುಡುಗಿ ಹಿಮಾ ದಾಸ್ -Vishwanews24

ನವದೆಹಲಿ: ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಗೆದ್ದು ಪದಕ ಪಡೆಯುವ ಮೂಲಕ 15 ದಿನಗಳಲ್ಲಿ ಹಿಮಾ ದಾಸ್ 5 ಚಿನ್ನದ ಪದಕೆ ಗೆದ್ದು ವಿನೂತನ ದಾಖಲೆ ನಿರ್ಮಿಸಿದ್ದಾರೆ.
ಝೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಹಿಳಾ ವಿಭಾಗದ 400 ಮೀ. ಓಟವನ್ನು ಹಿಮಾ ದಾಸ್ ಕೇವಲ 52.09 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸಿದ್ದು ಈ ಆವೃತ್ತಿ (ಸೀಸನ್) ನ ಅತ್ಯುತ್ತಮ ಕಾಲಾವಧಿ ಎಂಬ ದಾಖಲೆಗೆ ಪಾತ್ರವಾಗಿದೆ.
ಜುಲೈ 2 ರಂದು ಪೋಲೆಂಡ್‌ನಲ್ಲಿ ನಡೆದಿದ್ದ ಪೋಜ್ನಾನ್ ಅಥ್ಲೆಟಿಕ್ಸ್ ಗ್ರ್ಯಾನ್ ಪ್ರಿ ಕೂಟದ 200 ಮೀ. ಸ್ಪರ್ಧೆ ಯಲ್ಲಿ ಹಿಮಾ 23.65 ಸೆ.ಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದಿದ್ದರು. ಬಳಿಕ ಜು.7 ರಂದು ಪೋಲೆಂಡ್‌ನಲ್ಲಿ ನಡೆದಿದ್ದ ಕುಟ್ನೋ ಅಥ್ಲೆಟಿಕ್ಸ್ ಕೂಟದ 200 ಮೀ. ಓಟದಲ್ಲಿ ಹಿಮಾ ದಾಸ್ 23.97 ಸೆ.ಗಳಲ್ಲಿ ಗುರಿ ಯನ್ನು ಪೂರ್ಣಗೊಳಿಸಿ ಚಿನ್ನದ ಪದಕ ಜಯಿಸಿದ್ದರು.
ನಂತರ ಜು. 13 ರಂದು ಜೆಕ್ ಗಣರಾಜ್ಯದಲ್ಲಿ ನಡೆದಿದ್ದ ಕ್ಲಾಡ್ನೋ ಅಥ್ಲೆಟಿಕ್ಸ್ ಕೂಟದ 200 ಮೀ. ಸ್ಪರ್ಧೆ ಯಲ್ಲಿ 23.43 ಸೆ.ಗಳಲ್ಲಿ ಗುರಿ ಮುಟ್ಟಿ ಹಿಮಾ 3ನೇ ಚಿನ್ನ ಜಯಿಸಿದ್ದರು. ಜು.17 ರಂದು ಜೆಕ್ ಗಣರಾಜ್ಯ ದಲ್ಲಿ ನಡೆದಿದ್ದ ಟಬೂರ್ ಗ್ರ್ಯಾನ್ ಪ್ರಿ ಅಥ್ಲೆಟಿಕ್ಸ್ ಕೂಟದ 200 ಮೀ. ಓಟದಲ್ಲಿ 23.25 ಸೆ.ಗಳಲ್ಲಿ ಗುರಿ ತಲುಪಿ ಚಿನ್ನ ಜಯಿಸಿದರು. ಇದು ಕೂಡ ಕೇವಲ 15 ದಿನಗಳಲ್ಲಿ 4 ಚಿನ್ನ ಗೆದ್ದ ಸಾಧನೆಯನ್ನು ಹಿಮಾ ಮಾಡಿದ್ದರು.

ಇದರಲ್ಲಿ ಹಿಮಾ ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್ ಕೂಟದಲ್ಲಿ 3 ಚಿನ್ನ, ಪೋಲೆಂಡ್‌ನಲ್ಲಿ 2 ಚಿನ್ನ ಗೆದ್ದಿದ್ದಾರೆ. ಈ ಋತುವಿನಲ್ಲಿ ಹಿಮಾ ದಾಸ್ 400 ಮೀ. ಓಟದಲ್ಲಿ ಮೊದಲ ಚಿನ್ನ ಗೆದ್ದಿದ್ದಾರೆ..

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago