ಕೋಲ್ಕತಾ:ಭಾರತದಲ್ಲಿರುವ ಶೇ.30ರಷ್ಟು ಮುಸ್ಲಿಮರು ಒಗ್ಗೂಡಿದರೆ ನಾಲ್ಕು ಪಾಕಿಸ್ತಾನಗಳು ಸೃಷ್ಟಿಯಾಗುತ್ತದೆ ಎಂದು ಟಿಎಂಸಿ ನಾಯಕ ಶೇಖ್ ಅಲಾಮ್ ಹೇಳಿಕೆ ನೀಡುವ ಮೂಲಕ ವಿವಾದಕ್ಕೀಡಾಗಿದ್ದು, ಈ ಹೇಳಿಕೆಯನ್ನು ಭಾರತೀಯ ಜನತಾ ಪಕ್ಷ ಖಂಡಿಸಿದೆ.
ಪಶ್ಚಿಮಬಂಗಾಳದ ಬಿಜೆಪಿ ಮುಖಂಡ ಅಮಿತ್ ಮಾಳವೀಯ ಅವರು ಅಲಾಮ್ ಹೇಳಿಕೆಯ ವೀಡಿಯೋವನ್ನು ಟ್ವೀಟ್ ಮಾಡುವ ಮೂಲಕ ಇದೊಂದು ಉದ್ದೇಶಪೂರ್ವಕವಾಗಿ ನೀಡಿರುವ ಹೇಳಿಕೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ : ಮಾರ್ಚ್ 31 ರೊಳಗೆ ಪಾನ್, ಆಧಾರ್ ಕಾರ್ಡ್ ಲಿಂಕ್ ಮಾಡಿ.. -Vishwanews24
ಪಶ್ಚಿಮಬಂಗಾಳದಲ್ಲಿ ಹಿಂದೂಗಳನ್ನು ಮಮತಾ ಅವರು 2ನೇ ದರ್ಜೆಯ ನಾಗರಿಕರಂತೆ ನಡೆಸಿಕೊಂಡಿದ್ದಾರೆ. ಅವರ ಆಪ್ತ ಶೇಖ್ ರಿಂದ ಇಂಥ ಹೇಳಿಕೆಗಳು ಬರುತ್ತವೆ ಎಂದು ಮಾಳವೀಯ ತಿರುಗೇಟು ನೀಡಿದ್ದಾರೆ.
ಟಿಎಂಸಿಯ ಶೇಖ್ ಅಲಾಮ್ ರಂತಹ ನಾಯಕರು ನಾಲ್ಕು ಪಾಕಿಸ್ತಾನ ರಚನೆಯಾಗಬೇಕು ಎಂಬ ದಿಟ್ಟತನ ತೋರಿಸುತ್ತಾರೆ. ಯಾಕೆಂದರೆ ಮಮತಾ ಬ್ಯಾನರ್ಜಿಯನ್ನು ಕಳೆದ ಹತ್ತು ವರ್ಷಗಳ ರಾಜಕೀಯದಲ್ಲಿ ಒಲೈಸಿಕೊಳ್ಳಲು ಇಂತಹ ಹೇಳಿಕೆ ನೀಡುತ್ತಿರುತ್ತಾರೆ ಎಂದು ಮಾಳವೀಯ ಟ್ವೀಟ್ ನಲ್ಲಿ ದೂರಿದ್ದಾರೆ.
“ನಾವು ಅಲ್ಪಸಂಖ್ಯಾತರು ಶೇ.30ರಷ್ಟಿದ್ದೇವೆ, ಉಳಿದವರು ಶೇ.70ರಷ್ಟಿದ್ದಾರೆ. ಆ ನಿಟ್ಟಿನಲ್ಲಿ ಅವರು(ಬಿಜೆಪಿ) ಬಂಗಾಳದಲ್ಲಿ ಶೇ.70ರಷ್ಟಿರುವ ಜನಸಂಖ್ಯೆ ಆಧಾರದ ಮೇಲೆ ಗದ್ದುಗೆ ಏರುವ ಕನಸು ಕಾಣುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು, ಒಂದು ವೇಳೆ ಶೇ.30ರಷ್ಟಿರುವ ಮುಸ್ಲಿಮರು ಒಗ್ಗೂಡಿದರೆ ನಾಲ್ಕು ಪಾಕಿಸ್ತಾನ ರಚಿಸಬಹುದು, ಆಗ ಭಾರತದಲ್ಲಿರುವ ಶೇ.70ರಷ್ಟು ಜನ ಎಲ್ಲಿಗೆ ಹೋಗುತ್ತಾರೆ ಎಂದು ಅಲಾಮ್ ಪ್ರಶ್ನಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಈ ಹೇಳಿಕೆಯ ವಿವಾದ ಜೋರಾಗುತ್ತಲೇ ಸ್ಪಷ್ಟನೆ ನೀಡಿರುವ ಶೇಖ್ ಅಲಾಮ್, ಮುಸ್ಲಿಮರ ಮೇಲೆ ದಬ್ಬಾಳಿಕೆ ಹೆಚ್ಚಾದರೆ ಎಲ್ಲರೂ ಒಗ್ಗೂಡುತ್ತಾರೆ ಎಂದಷ್ಟೇ ನಾನು ಪ್ರಸ್ತಾಪಿಸಿದ್ದೆ ಎಂದಿದ್ದಾರೆ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…