Featured

ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ : ಜರ್ಮನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ – vishwanews24

ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ : ಜರ್ಮನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ

ಬರ್ಲಿನ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜರ್ಮನಿ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.

ಮ್ಯೂನಿಚ್‌ನಲ್ಲಿರುವ ಬಿಎಂಡಬ್ಲ್ಯೂಘಟಕಕ್ಕೆ ಭೇಟಿ ನೀಡಿದ ಬಳಿಕ ರಾಹುಲ್ ಗಾಂಧಿಯವರು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಭಾರತದಲ್ಲಿ ಉತ್ಪಾದನಾ ವಲಯವನ್ನು ಟೀಕಿಸುತ್ತಿರುವುದು ಕಂಡುಬಂದಿದೆ.

ಉತ್ಪಾದನೆಯು ಬಲವಾದ ಆರ್ಥಿಕತೆಯ ಬೆನ್ನೆಲುಬಾಗಿದೆ. ದುಃಖಕರ ವಿಚಾರವೆಂದರೆ ಭಾರತದಲ್ಲಿ ಉತ್ಪಾದನೆ ಕುಸಿಯುತ್ತಿದೆ. ದೊಡ್ಡ ಪ್ರಮಾಣದ ಉದ್ಯೋಗಗಳನ್ನು ಸೃಷ್ಟಿಸಲು ಭಾರತಕ್ಕೆ ಉತ್ತಮ ಉತ್ಪಾದನಾ ವಾತಾವರಣದ ಅಗತ್ಯವಿದೆ. ಪ್ರಸ್ತುತ, ಭಾರತದಲ್ಲಿ ಉತ್ಪಾದನಾ ವಲಯವು ನಿರೀಕ್ಷಿತ ವೇಗದಲ್ಲಿ ಬೆಳೆಯುತ್ತಿಲ್ಲ. ಇದು ಯುವಜನರಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ತಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರವಾಸದ ಸಮಯದಲ್ಲಿ ಅವರಿಂದ ಟೀಕೆಗಳನ್ನು ನಿರೀಕ್ಷಿಸುತ್ತಿದ್ದ ಬಿಜೆಪಿ ನಾಯಕರನ್ನು ರಾಹುಲ್ ಹೇಳಿಕೆ ಕೆರಳಿಸಿದೆ. ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿಯವರು ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಕಯಿಸಿ, ಕಳೆದ 10 ವರ್ಷಗಳಲ್ಲಿ ಒಟ್ಟು ಎಲೆಕ್ಟ್ರಾನಿಕ್ಸ್ ವಸ್ತಗಳ ತಯಾರಿಕೆಯಲ್ಲಿ 495% ರಷ್ಟು ಬೆಳವಣಿಗೆ ಮತ್ತು ರಫ್ತಿನಲ್ಲಿ 760% ರಷ್ಟು ಬೆಳವಣಿಗೆ ಕಂಡುಬಂದಿದೆ. 1991 ರಿಂದ ದೇಶೀಯ ವಾಹನಗಳ ಉತ್ಪಾದನೆಯು 14 ಪಟ್ಟು ಹೆಚ್ಚಾಗಿದೆ. ಇದಲ್ಲದೆ, ಭಾರತವು 2030ರ ವೇಳೆಗೆ 50 ಮಿಲಿಯನ್ ವಾಹನಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ. 2047 ರ ವೇಳೆಗೆ ಜಾಗತಿಕವಾಗಿ ಎರಡು ಅಗ್ರ ಆಟೋ ಉತ್ಪಾದನಾ ರಾಷ್ಟ್ರಗಳಲ್ಲಿ ಒಂದಾಗುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

11 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

12 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

12 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

14 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

14 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

14 hours ago