Featured

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,120 ನೂತನ ಕೋವಿಡ್ ಪ್ರಕರಣಗಳು ವರದಿ: vishwanews24

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,120 ನೂತನ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3.20 ಕೋಟಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯಶುಕ್ರವಾರ(ಆಗಸ್ಟ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕಳೆದ 24ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ನಿಂದ 585 ಮಂದಿ ಸಾವನ್ನಪ್ಪಿದ್ದು, ಒಟ್ಟು ದೇಶದಲ್ಲಿ ಕೋವಿಡ್ ನಿಂದ

ಸಾವನ್ನಪ್ಪಿರುವವರ ಸಂಖ್ಯೆ 4.3 ಲಕ್ಷಕ್ಕೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3.85 ಲಕ್ಷಕ್ಕೆ ಇಳಿಕೆಯಾಗಿದೆ. ಇದು 2020ರ ಮಾರ್ಚ್ ನಂತರದ ಕನಿಷ್ಠ ಪ್ರಮಾಣದ್ದಾಗಿದೆ.

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,295 ಮಂ ದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂ ತ ಕೋವಿಡ್ ನಿಂದ 3,13,02,345 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ.97.46ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.04ರಷ್ಟಿದೆ ಎಂದು ವರದಿ ತಿಳಿಸಿದೆ.

ವಾರದ ಪಾಸಿಟಿವಿಟಿ ದರ ಶೇ.2.13ರಷ್ಟಿದೆ. ಕೋವಿಡ್ ಲಸಿಕೆ ಅಭಿಯಾನದಲ್ಲಿ ದೇಶಾದ್ಯಂ ತ ಈವರೆಗೆ ಅಂದಾಜು 52.95 ಕೋಟಿ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago