Featured

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,120 ನೂತನ ಕೋವಿಡ್ ಪ್ರಕರಣಗಳು ವರದಿ: vishwanews24

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,120 ನೂತನ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3.20 ಕೋಟಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯಶುಕ್ರವಾರ(ಆಗಸ್ಟ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕಳೆದ 24ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ನಿಂದ 585 ಮಂದಿ ಸಾವನ್ನಪ್ಪಿದ್ದು, ಒಟ್ಟು ದೇಶದಲ್ಲಿ ಕೋವಿಡ್ ನಿಂದ

ಸಾವನ್ನಪ್ಪಿರುವವರ ಸಂಖ್ಯೆ 4.3 ಲಕ್ಷಕ್ಕೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3.85 ಲಕ್ಷಕ್ಕೆ ಇಳಿಕೆಯಾಗಿದೆ. ಇದು 2020ರ ಮಾರ್ಚ್ ನಂತರದ ಕನಿಷ್ಠ ಪ್ರಮಾಣದ್ದಾಗಿದೆ.

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,295 ಮಂ ದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂ ತ ಕೋವಿಡ್ ನಿಂದ 3,13,02,345 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ.97.46ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.04ರಷ್ಟಿದೆ ಎಂದು ವರದಿ ತಿಳಿಸಿದೆ.

ವಾರದ ಪಾಸಿಟಿವಿಟಿ ದರ ಶೇ.2.13ರಷ್ಟಿದೆ. ಕೋವಿಡ್ ಲಸಿಕೆ ಅಭಿಯಾನದಲ್ಲಿ ದೇಶಾದ್ಯಂ ತ ಈವರೆಗೆ ಅಂದಾಜು 52.95 ಕೋಟಿ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

7 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

7 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

8 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

9 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

9 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

9 hours ago