Featured

ಭಾರತದಲ್ಲಿ ತಾವು ಅಸುರಕ್ಷಿತರೆಂದು ಹೇಳುವವರ ಮೇಲೆ ಬಾಂಬ್‌ ಹಾಕಿ ಉಡಾಯಿಸಬೇಕು : ಬಿಜೆಪಿ ಶಾಸಕ ವಿಕ್ರಮ್ ಸೈನಿ

ಮುಜಫರ್ ನಗರ : ಭಾರತದಲ್ಲಿ ಅಭದ್ರತೆ ಇದೆ ಎಂದವರಿಗೆ ಬಾಂಬ್ ಹಾಕಿ ಉಡಾಯಿಸುತ್ತೇನೆ ಎಂದು ಮುಜಫರ್ ನಗರ ಬಿಜೆಪಿ ಶಾಸಕ ವಿಕ್ರಮ್ ಸೈನಿ ಹೇಳಿಕೆ ನೀಡಿದ್ದಾರೆ. 

ಭಾರತದಲ್ಲಿ ಆತಂಕವಿದೆ ಎಂದವರು ದೇಶದ್ರೋಹಿಗಳು, ಭಾರತದಲ್ಲಿ ವಾಸಿಸಲು ಆತಂಕವಿದೆ ಎಂದವರಿಗೆ ಬಾಂಬ್ ಹಾಕಿ ಕೊಲ್ಲಬೇಕು, ಯಾರೊಬ್ಬರನ್ನೂ ಬಿಡುವುದಿಲ್ಲ ಎಂದು ಅವರು  ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಾಸಕ  “ಭಾರತದಲ್ಲಿ ತಾವು ಅಸುರಕ್ಷಿತರೆಂದು ಹೇಳುವವರ ಮೇಲೆ ಬಾಂಬ್‌ ಹಾಕಬೇಕು – ಇದು ನನ್ನ ವೈಯಕ್ತಿಕ ಅನ್ನಿಸಿಕೆ. ನಿಜಕ್ಕಾದರೆ ಹಾಗೆ ಹೇಳುವವರು ದೇಶ ದ್ರೋಹಿಗಳು. ಅಂಥವರನ್ನು ಶಿಕ್ಷಿಸಲು ಕಾನೂನನ್ನು ತರಬೇಕು, ಏಕೆಂದರೆ ಈ ರೀತಿಯ ಹೇಳಿಕೆಗಳು ದೇಶದ್ರೋಹದ ಕೃತ್ಯವಾಗುತ್ತದೆ. ನನಗೊಂದು ಸಚಿವ ಪದ ಕೊಡಿ. ನಾನು ಇಂಥವರ ಮೇಲೆ ಬಾಂಬ್‌ ಹಾಕುತ್ತೇನೆ; ಈ ರೀತಿಯ ಹೇಳಿಕೆ ನೀಡುವ ಯಾರನ್ನೂ ಬಿಡದೆ ಬಾಂಬ್‌ ಹಾಕಿ ನಾಶ ಮಾಡುತ್ತೇನೆ’.

“ಹಮ್ ತೋ ದೇಶ್ ದೀವಾನೇ ಹೇ” ಎಂದ ಅವರು “ದೇಶದಲ್ಲಿ ಅಸುರಕ್ಷತೆಯ ಭಾವನೆ ಹೊಂದಿರುವವರು ಒಂದೋ ದೇಶ ಬಿಟ್ಟು ತೆರಳಬೇಕು ಇಲ್ಲವೇ ಸರಕಾರ ಅವರಿಗೆ ಏನಾದರೂ ಏರ್ಪಾಟು ಮಾಡಬೇಕು,” ಎಂದು ಆಗ್ರಹಿಸಿದರು.

ಭಾರತದಲ್ಲಿ ಅಸುರಕ್ಷಿತ ಭಾವನೆಯನ್ನು ಅನುಭವಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹೊಸ ಕಾನೂನು ರೆಚಿಸುವಂತೆ ಆಗ್ರಹಿಸಿರುವ ಅವರು ಅಂತಹವರನ್ನು ದೇಶದ್ರೋಹಿಗಳು ಎಂದು ಹೇಳಿದರು.

Vishwa News 24

Recent Posts

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

9 minutes ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago