ಮುಜಫರ್ ನಗರ : ಭಾರತದಲ್ಲಿ ಅಭದ್ರತೆ ಇದೆ ಎಂದವರಿಗೆ ಬಾಂಬ್ ಹಾಕಿ ಉಡಾಯಿಸುತ್ತೇನೆ ಎಂದು ಮುಜಫರ್ ನಗರ ಬಿಜೆಪಿ ಶಾಸಕ ವಿಕ್ರಮ್ ಸೈನಿ ಹೇಳಿಕೆ ನೀಡಿದ್ದಾರೆ.
ಭಾರತದಲ್ಲಿ ಆತಂಕವಿದೆ ಎಂದವರು ದೇಶದ್ರೋಹಿಗಳು, ಭಾರತದಲ್ಲಿ ವಾಸಿಸಲು ಆತಂಕವಿದೆ ಎಂದವರಿಗೆ ಬಾಂಬ್ ಹಾಕಿ ಕೊಲ್ಲಬೇಕು, ಯಾರೊಬ್ಬರನ್ನೂ ಬಿಡುವುದಿಲ್ಲ ಎಂದು ಅವರು ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಾಸಕ “ಭಾರತದಲ್ಲಿ ತಾವು ಅಸುರಕ್ಷಿತರೆಂದು ಹೇಳುವವರ ಮೇಲೆ ಬಾಂಬ್ ಹಾಕಬೇಕು – ಇದು ನನ್ನ ವೈಯಕ್ತಿಕ ಅನ್ನಿಸಿಕೆ. ನಿಜಕ್ಕಾದರೆ ಹಾಗೆ ಹೇಳುವವರು ದೇಶ ದ್ರೋಹಿಗಳು. ಅಂಥವರನ್ನು ಶಿಕ್ಷಿಸಲು ಕಾನೂನನ್ನು ತರಬೇಕು, ಏಕೆಂದರೆ ಈ ರೀತಿಯ ಹೇಳಿಕೆಗಳು ದೇಶದ್ರೋಹದ ಕೃತ್ಯವಾಗುತ್ತದೆ. ನನಗೊಂದು ಸಚಿವ ಪದ ಕೊಡಿ. ನಾನು ಇಂಥವರ ಮೇಲೆ ಬಾಂಬ್ ಹಾಕುತ್ತೇನೆ; ಈ ರೀತಿಯ ಹೇಳಿಕೆ ನೀಡುವ ಯಾರನ್ನೂ ಬಿಡದೆ ಬಾಂಬ್ ಹಾಕಿ ನಾಶ ಮಾಡುತ್ತೇನೆ’.
“ಹಮ್ ತೋ ದೇಶ್ ದೀವಾನೇ ಹೇ” ಎಂದ ಅವರು “ದೇಶದಲ್ಲಿ ಅಸುರಕ್ಷತೆಯ ಭಾವನೆ ಹೊಂದಿರುವವರು ಒಂದೋ ದೇಶ ಬಿಟ್ಟು ತೆರಳಬೇಕು ಇಲ್ಲವೇ ಸರಕಾರ ಅವರಿಗೆ ಏನಾದರೂ ಏರ್ಪಾಟು ಮಾಡಬೇಕು,” ಎಂದು ಆಗ್ರಹಿಸಿದರು.
ಭಾರತದಲ್ಲಿ ಅಸುರಕ್ಷಿತ ಭಾವನೆಯನ್ನು ಅನುಭವಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹೊಸ ಕಾನೂನು ರೆಚಿಸುವಂತೆ ಆಗ್ರಹಿಸಿರುವ ಅವರು ಅಂತಹವರನ್ನು ದೇಶದ್ರೋಹಿಗಳು ಎಂದು ಹೇಳಿದರು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…