Featured

ಭಾರತದಲ್ಲಿ ತಾವು ಅಸುರಕ್ಷಿತರೆಂದು ಹೇಳುವವರ ಮೇಲೆ ಬಾಂಬ್‌ ಹಾಕಿ ಉಡಾಯಿಸಬೇಕು : ಬಿಜೆಪಿ ಶಾಸಕ ವಿಕ್ರಮ್ ಸೈನಿ

ಮುಜಫರ್ ನಗರ : ಭಾರತದಲ್ಲಿ ಅಭದ್ರತೆ ಇದೆ ಎಂದವರಿಗೆ ಬಾಂಬ್ ಹಾಕಿ ಉಡಾಯಿಸುತ್ತೇನೆ ಎಂದು ಮುಜಫರ್ ನಗರ ಬಿಜೆಪಿ ಶಾಸಕ ವಿಕ್ರಮ್ ಸೈನಿ ಹೇಳಿಕೆ ನೀಡಿದ್ದಾರೆ. 

ಭಾರತದಲ್ಲಿ ಆತಂಕವಿದೆ ಎಂದವರು ದೇಶದ್ರೋಹಿಗಳು, ಭಾರತದಲ್ಲಿ ವಾಸಿಸಲು ಆತಂಕವಿದೆ ಎಂದವರಿಗೆ ಬಾಂಬ್ ಹಾಕಿ ಕೊಲ್ಲಬೇಕು, ಯಾರೊಬ್ಬರನ್ನೂ ಬಿಡುವುದಿಲ್ಲ ಎಂದು ಅವರು  ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಾಸಕ  “ಭಾರತದಲ್ಲಿ ತಾವು ಅಸುರಕ್ಷಿತರೆಂದು ಹೇಳುವವರ ಮೇಲೆ ಬಾಂಬ್‌ ಹಾಕಬೇಕು – ಇದು ನನ್ನ ವೈಯಕ್ತಿಕ ಅನ್ನಿಸಿಕೆ. ನಿಜಕ್ಕಾದರೆ ಹಾಗೆ ಹೇಳುವವರು ದೇಶ ದ್ರೋಹಿಗಳು. ಅಂಥವರನ್ನು ಶಿಕ್ಷಿಸಲು ಕಾನೂನನ್ನು ತರಬೇಕು, ಏಕೆಂದರೆ ಈ ರೀತಿಯ ಹೇಳಿಕೆಗಳು ದೇಶದ್ರೋಹದ ಕೃತ್ಯವಾಗುತ್ತದೆ. ನನಗೊಂದು ಸಚಿವ ಪದ ಕೊಡಿ. ನಾನು ಇಂಥವರ ಮೇಲೆ ಬಾಂಬ್‌ ಹಾಕುತ್ತೇನೆ; ಈ ರೀತಿಯ ಹೇಳಿಕೆ ನೀಡುವ ಯಾರನ್ನೂ ಬಿಡದೆ ಬಾಂಬ್‌ ಹಾಕಿ ನಾಶ ಮಾಡುತ್ತೇನೆ’.

“ಹಮ್ ತೋ ದೇಶ್ ದೀವಾನೇ ಹೇ” ಎಂದ ಅವರು “ದೇಶದಲ್ಲಿ ಅಸುರಕ್ಷತೆಯ ಭಾವನೆ ಹೊಂದಿರುವವರು ಒಂದೋ ದೇಶ ಬಿಟ್ಟು ತೆರಳಬೇಕು ಇಲ್ಲವೇ ಸರಕಾರ ಅವರಿಗೆ ಏನಾದರೂ ಏರ್ಪಾಟು ಮಾಡಬೇಕು,” ಎಂದು ಆಗ್ರಹಿಸಿದರು.

ಭಾರತದಲ್ಲಿ ಅಸುರಕ್ಷಿತ ಭಾವನೆಯನ್ನು ಅನುಭವಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹೊಸ ಕಾನೂನು ರೆಚಿಸುವಂತೆ ಆಗ್ರಹಿಸಿರುವ ಅವರು ಅಂತಹವರನ್ನು ದೇಶದ್ರೋಹಿಗಳು ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago