Featured

ಭಾರತದೊಂದಿಗೆ ನಮಗೆ ಯುದ್ಧ ಬೇಕಿಲ್ಲ; ಮಾತುಕತೆ ಬೇಕು: ಪಾಕ್‌ ಸಚಿವ ಶಾ ಮಹಮೂದ್‌ ಕುರೇಶಿ

ಇಸ್ಲಾಮಾಬಾದ್‌ :ಭಾರತ – ಪಾಕ್‌ ನಡುವಿನ ಸಂಘರ್ಷಕ್ಕೆ ಯುದ್ಧ ವು ಒಂದು ಪರಿಹಾರವೇ ಅಲ್ಲ, ಶಾಂತಿಯುತ ಮಾತುಕತೆಯಲ್ಲೇ ಪರಿಹಾರವನ್ನು ಕಾಣಬೇಕಿದೆ” ಎಂದು ಪಾಕ್‌ ವಿದೇಶ ಸಚಿವ ಶಾ ಮಹಮೂದ್‌ ಕುರೇಶಿ ಹೇಳಿದ್ದಾರೆ.

ಅಲ್‌ ಜಜೀರಾ ವಾಹಿನಿಯೊಂದಿಗೆ ಮಾತನಾಡುತ್ತಿದ್ದ ಅವರು “ಪರಸ್ಪರ ನೆರೆಹೊರೆಯ ಭಾರತ, ಪಾಕಿಸ್ಥಾನ ಅಣುಶಕ್ತ ರಾಷ್ಟ್ರಗಳಾಗಿವೆ. ಇವುಗಳ ನಡುವಿನ ಬಿಕ್ಕಟ್ಟು, ಸಂಘರ್ಷಕ್ಕೆ ಯುದ್ಧದಲ್ಲಿ ಯಾವುದೇ ಪರಿಹಾರವಿಲ್ಲ. ಇದನ್ನು ಉಭಯತರೂ ಮನಗಾಣುವುದರಲ್ಲೇ ವಿವೇಕವಿದೆ. ಅಂತೆಯೇ ನಾವು ಮಾತುಕತೆಗೆ ಸಿದ್ಧರಾಗಿದ್ದೇವೆ. ಉಭಯ ದೇಶಗಳ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ಮಾತುಕತೆ ಬಿಟ್ಟರೆ ನಮಗೆ ಬೇರೆ ಆಯ್ಕೆಯೇ ಇಲ್ಲ’ ಎಂದು ಹೇಳಿದರು.

ಇಮ್ರಾನ್‌ ಖಾನ್‌ ನೇತೃತ್ವದ ನೂತನ ಪಾಕ್‌ ಸರಕಾರ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸಿದೆ.ಈ ದಿಶೆಯಲ್ಲಿ  ಭಾರತ ಒಂದು ಹೆಜ್ಜೆ ಮುಂದೆ ಇಟ್ಟರೆ ಪಾಕಿಸ್ಥಾನ ಎರಡು ಹೆಜ್ಜೆ ಮುಂದೆ ಇಡಲು ಸಿದ್ಧವಿದೆ ಎಂದು ಇಮ್ರಾನ್‌ ಖಾನ್‌ ಈಗಾಗಲೇ ಭಾರತಕ್ಕೆ ತಿಳಿಸಿದ್ದಾರೆ. ಮಾತ್ರವಲ್ಲದೆ ಭಾರತದೊಂದಿಗೆ ರಚನಾತ್ಮಕ, ಶಾಂತಿಯುತ ಮಾತುಕತೆ ನಡೆಸುವ ಇಚ್ಛೆಯನ್ನು ತಾನು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ ಪ್ರಕಟಿಸಿದ್ದಾರೆ ಎಂದು ಕುರೇಶಿ ಹೇಳಿದರು.

ಇದೇ ವೇಳೆ ಕುರೇಶಿ ಅವರು ಭಾರತ ಮತ್ತು ಪಾಕಿಸ್ಥಾನದ ನಡುವಿನ ಮೂಲಭೂತ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸಲು ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕೆಂದೂ ಅಲ್‌ ಜಜೀರಾ ಸಂದರ್ಶನದಲ್ಲಿ ಹೇಳಿದರು.

ಕಾಶ್ಮೀರ ಜನರ ಇಚ್ಛಾನುಸಾರ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸುವಂತೆ ಅವರು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಅಂಟೋನಿಯೋ ಗುಟೆರಸ್‌ ಅವರನ್ನು ಕೋರಿದರು.

 

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

2 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

2 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

2 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago