ಇಸ್ಲಾಮಾಬಾದ್ : ”ಭಾರತ – ಪಾಕ್ ನಡುವಿನ ಸಂಘರ್ಷಕ್ಕೆ ಯುದ್ಧ ವು ಒಂದು ಪರಿಹಾರವೇ ಅಲ್ಲ, ಶಾಂತಿಯುತ ಮಾತುಕತೆಯಲ್ಲೇ ಪರಿಹಾರವನ್ನು ಕಾಣಬೇಕಿದೆ” ಎಂದು ಪಾಕ್ ವಿದೇಶ ಸಚಿವ ಶಾ ಮಹಮೂದ್ ಕುರೇಶಿ ಹೇಳಿದ್ದಾರೆ.
ಅಲ್ ಜಜೀರಾ ವಾಹಿನಿಯೊಂದಿಗೆ ಮಾತನಾಡುತ್ತಿದ್ದ ಅವರು “ಪರಸ್ಪರ ನೆರೆಹೊರೆಯ ಭಾರತ, ಪಾಕಿಸ್ಥಾನ ಅಣುಶಕ್ತ ರಾಷ್ಟ್ರಗಳಾಗಿವೆ. ಇವುಗಳ ನಡುವಿನ ಬಿಕ್ಕಟ್ಟು, ಸಂಘರ್ಷಕ್ಕೆ ಯುದ್ಧದಲ್ಲಿ ಯಾವುದೇ ಪರಿಹಾರವಿಲ್ಲ. ಇದನ್ನು ಉಭಯತರೂ ಮನಗಾಣುವುದರಲ್ಲೇ ವಿವೇಕವಿದೆ. ಅಂತೆಯೇ ನಾವು ಮಾತುಕತೆಗೆ ಸಿದ್ಧರಾಗಿದ್ದೇವೆ. ಉಭಯ ದೇಶಗಳ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ಮಾತುಕತೆ ಬಿಟ್ಟರೆ ನಮಗೆ ಬೇರೆ ಆಯ್ಕೆಯೇ ಇಲ್ಲ’ ಎಂದು ಹೇಳಿದರು.
ಇಮ್ರಾನ್ ಖಾನ್ ನೇತೃತ್ವದ ನೂತನ ಪಾಕ್ ಸರಕಾರ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸಿದೆ.ಈ ದಿಶೆಯಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಇಟ್ಟರೆ ಪಾಕಿಸ್ಥಾನ ಎರಡು ಹೆಜ್ಜೆ ಮುಂದೆ ಇಡಲು ಸಿದ್ಧವಿದೆ ಎಂದು ಇಮ್ರಾನ್ ಖಾನ್ ಈಗಾಗಲೇ ಭಾರತಕ್ಕೆ ತಿಳಿಸಿದ್ದಾರೆ. ಮಾತ್ರವಲ್ಲದೆ ಭಾರತದೊಂದಿಗೆ ರಚನಾತ್ಮಕ, ಶಾಂತಿಯುತ ಮಾತುಕತೆ ನಡೆಸುವ ಇಚ್ಛೆಯನ್ನು ತಾನು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ ಪ್ರಕಟಿಸಿದ್ದಾರೆ ಎಂದು ಕುರೇಶಿ ಹೇಳಿದರು.
ಇದೇ ವೇಳೆ ಕುರೇಶಿ ಅವರು ಭಾರತ ಮತ್ತು ಪಾಕಿಸ್ಥಾನದ ನಡುವಿನ ಮೂಲಭೂತ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸಲು ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕೆಂದೂ ಅಲ್ ಜಜೀರಾ ಸಂದರ್ಶನದಲ್ಲಿ ಹೇಳಿದರು.
ಕಾಶ್ಮೀರ ಜನರ ಇಚ್ಛಾನುಸಾರ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸುವಂತೆ ಅವರು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಅಂಟೋನಿಯೋ ಗುಟೆರಸ್ ಅವರನ್ನು ಕೋರಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…