ಇಸ್ಲಾಮಾಬಾದ್: ಭಾರತದೊಂದಿಗೆ ಯುದ್ಧವಾದಲ್ಲಿ ಪಾಕಿಸ್ತಾನ ಸೋಲುವುದು ಬಹುತೇಕ ಖಚಿತ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್ಗೆ ಸೋಲಾಗುತ್ತದೆ. ಆದರೆ ತಾವು ಯುದ್ಧ ವಿರೋಧಿಯಾಗಿದ್ದು, ಯುದ್ಧಕ್ಕೆ ಅವಕಾಶ ಕೊಡುವುದಿಲ್ಲ. ಅಣ್ವಸ್ತ್ರಗಳನ್ನು ಮೊದಲು ಬಳಕೆ ಮಾಡುವುದಿಲ್ಲ ಎಂದರು.
ಯುದ್ಧ ಮತ್ತು ಹಿಂಸಾಚಾರದಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ನಾನು. ನಾನು ಯುದ್ಧ ವಿರೋಧಿ. ಯುದ್ಧಗಳಿಂದ ಸಮಸ್ಯೆ ಪರಿಹಾರವಾಗುತ್ತದೆ ಎಂಬದರಲ್ಲಿ ನನಗೆ ನಂಬಿಕೆಯಿಲ್ಲ. ವಿಯೆಟ್ನಾಂ, ಇರಾಕ್ ಅನ್ನು ಉದಾಹರಣ ತೆಗೆದುಕೊಂಡಾಗ, ಅಲ್ಲಿ ನಡೆದ ಯುದ್ಧದಿಂದಾಗಿ ಹೊಸ ಸಮಸ್ಯೆಗಳು ಉದ್ಭವಿಸಿವೆ. ಯಾವ ಉದ್ದೇಶಕ್ಕಾಗಿ ಯುದ್ಧ ಮಾಡಲಾಗಿತ್ತೋ ಅದಕ್ಕಿಂತಲೂ ಭಯಂಕರವಾದ ಪರಿಸ್ಥಿತಿ ಅಲ್ಲಿದೆ ಎಂದು ಹೇಳಿದರು.
ಯುದ್ಧದಲ್ಲಿ ಸೋಲಾದರೆ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನ ಕೊನೆಯವರೆಗೂ ಹೋರಾಟ ಮಾಡಲಿದೆ. ಭಾರತ ಮತ್ತು ಪಾಕ್ ನಡುವೆ ಸಾಂಪ್ರದಾಯಿಕ ಯುದ್ಧ ಆರಂಭವಾದರೂ ಅದು ಅಣ್ವಸ್ತ್ರಗಳ ಪ್ರಯೋಗದೊಂದಿಗೆ ಅಂತ್ಯವಾಗುವ ಸಾಧ್ಯತೆ ಇದೆ. ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್ ಸೋಲುವ ಅಥವಾ ಶರಣಾಗುವ ಸ್ಥಿತಿ ತಲುಪಿದರೆ, ಕೊನೆಯ ಉಸಿರನವರೆಗೂ ಸ್ವಾತಂತ್ರ್ಯಕ್ಕಾಗಿ ಹೋರಾಡುವುದು ಶತಃಸಿದ್ಧ. ಹೀಗೆ ಕೊನೆ ಉಸಿರಿನವರೆಗಿನ ಹೋರಾಟದಲ್ಲಿ ಏನು ಬೇಕಾದರೂ ಆಗಬಹುದಾಗಿದೆ ಎಂಬುದನ್ನು ಎಲ್ಲರೂ ನೆನಪಿಟ್ಟುಕೊಳ್ಳಬೇಕು ಎಂದು ಇಮ್ರಾನ್ ಎಚ್ಚರಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…