Featured

ಭಾರತದೊಂದಿಗೆ ಯುದ್ಧದಲ್ಲಿ ಸೋಲಾದರೆ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನ ಕೊನೆಯವರೆಗೂ ಹೋರಾಟ ಮಾಡಲಿದೆ : ಪಾಕ್​ ಪ್ರಧಾನಿ -Vishwanews24

ಇಸ್ಲಾಮಾಬಾದ್​: ಭಾರತದೊಂದಿಗೆ ಯುದ್ಧವಾದಲ್ಲಿ ಪಾಕಿಸ್ತಾನ ಸೋಲುವುದು ಬಹುತೇಕ ಖಚಿತ ಎಂದು ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಹೇಳಿದ್ದಾರೆ.

ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್​ಗೆ ಸೋಲಾಗುತ್ತದೆ. ಆದರೆ ತಾವು ಯುದ್ಧ ವಿರೋಧಿಯಾಗಿದ್ದು, ಯುದ್ಧಕ್ಕೆ ಅವಕಾಶ ಕೊಡುವುದಿಲ್ಲ. ಅಣ್ವಸ್ತ್ರಗಳನ್ನು ಮೊದಲು ಬಳಕೆ ಮಾಡುವುದಿಲ್ಲ ಎಂದರು.

ಯುದ್ಧ ಮತ್ತು ಹಿಂಸಾಚಾರದಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ನಾನು. ನಾನು ಯುದ್ಧ ವಿರೋಧಿ. ಯುದ್ಧಗಳಿಂದ ಸಮಸ್ಯೆ ಪರಿಹಾರವಾಗುತ್ತದೆ ಎಂಬದರಲ್ಲಿ ನನಗೆ ನಂಬಿಕೆಯಿಲ್ಲ. ವಿಯೆಟ್ನಾಂ, ಇರಾಕ್​ ಅನ್ನು ಉದಾಹರಣ ತೆಗೆದುಕೊಂಡಾಗ, ಅಲ್ಲಿ ನಡೆದ ಯುದ್ಧದಿಂದಾಗಿ ಹೊಸ ಸಮಸ್ಯೆಗಳು ಉದ್ಭವಿಸಿವೆ. ಯಾವ ಉದ್ದೇಶಕ್ಕಾಗಿ ಯುದ್ಧ ಮಾಡಲಾಗಿತ್ತೋ ಅದಕ್ಕಿಂತಲೂ ಭಯಂಕರವಾದ ಪರಿಸ್ಥಿತಿ ಅಲ್ಲಿದೆ ಎಂದು ಹೇಳಿದರು.

ಯುದ್ಧದಲ್ಲಿ ಸೋಲಾದರೆ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನ ಕೊನೆಯವರೆಗೂ ಹೋರಾಟ ಮಾಡಲಿದೆ. ಭಾರತ ಮತ್ತು ಪಾಕ್​ ನಡುವೆ ಸಾಂಪ್ರದಾಯಿಕ ಯುದ್ಧ ಆರಂಭವಾದರೂ ಅದು ಅಣ್ವಸ್ತ್ರಗಳ ಪ್ರಯೋಗದೊಂದಿಗೆ ಅಂತ್ಯವಾಗುವ ಸಾಧ್ಯತೆ ಇದೆ. ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್​ ಸೋಲುವ ಅಥವಾ ಶರಣಾಗುವ ಸ್ಥಿತಿ ತಲುಪಿದರೆ, ಕೊನೆಯ ಉಸಿರನವರೆಗೂ ಸ್ವಾತಂತ್ರ್ಯಕ್ಕಾಗಿ ಹೋರಾಡುವುದು ಶತಃಸಿದ್ಧ. ಹೀಗೆ ಕೊನೆ ಉಸಿರಿನವರೆಗಿನ ಹೋರಾಟದಲ್ಲಿ ಏನು ಬೇಕಾದರೂ ಆಗಬಹುದಾಗಿದೆ ಎಂಬುದನ್ನು ಎಲ್ಲರೂ ನೆನಪಿಟ್ಟುಕೊಳ್ಳಬೇಕು ಎಂದು ಇಮ್ರಾನ್​ ಎಚ್ಚರಿಸಿದರು.

Vishwa News 24

Recent Posts

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ…

2 hours ago

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…

2 hours ago

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…

2 hours ago

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…

3 hours ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…

3 hours ago

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…

3 hours ago