Featured

ಭಾರತದೊಂದಿಗೆ ಯುದ್ಧದಲ್ಲಿ ಸೋಲಾದರೆ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನ ಕೊನೆಯವರೆಗೂ ಹೋರಾಟ ಮಾಡಲಿದೆ : ಪಾಕ್​ ಪ್ರಧಾನಿ -Vishwanews24

ಇಸ್ಲಾಮಾಬಾದ್​: ಭಾರತದೊಂದಿಗೆ ಯುದ್ಧವಾದಲ್ಲಿ ಪಾಕಿಸ್ತಾನ ಸೋಲುವುದು ಬಹುತೇಕ ಖಚಿತ ಎಂದು ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಹೇಳಿದ್ದಾರೆ.

ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್​ಗೆ ಸೋಲಾಗುತ್ತದೆ. ಆದರೆ ತಾವು ಯುದ್ಧ ವಿರೋಧಿಯಾಗಿದ್ದು, ಯುದ್ಧಕ್ಕೆ ಅವಕಾಶ ಕೊಡುವುದಿಲ್ಲ. ಅಣ್ವಸ್ತ್ರಗಳನ್ನು ಮೊದಲು ಬಳಕೆ ಮಾಡುವುದಿಲ್ಲ ಎಂದರು.

ಯುದ್ಧ ಮತ್ತು ಹಿಂಸಾಚಾರದಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ನಾನು. ನಾನು ಯುದ್ಧ ವಿರೋಧಿ. ಯುದ್ಧಗಳಿಂದ ಸಮಸ್ಯೆ ಪರಿಹಾರವಾಗುತ್ತದೆ ಎಂಬದರಲ್ಲಿ ನನಗೆ ನಂಬಿಕೆಯಿಲ್ಲ. ವಿಯೆಟ್ನಾಂ, ಇರಾಕ್​ ಅನ್ನು ಉದಾಹರಣ ತೆಗೆದುಕೊಂಡಾಗ, ಅಲ್ಲಿ ನಡೆದ ಯುದ್ಧದಿಂದಾಗಿ ಹೊಸ ಸಮಸ್ಯೆಗಳು ಉದ್ಭವಿಸಿವೆ. ಯಾವ ಉದ್ದೇಶಕ್ಕಾಗಿ ಯುದ್ಧ ಮಾಡಲಾಗಿತ್ತೋ ಅದಕ್ಕಿಂತಲೂ ಭಯಂಕರವಾದ ಪರಿಸ್ಥಿತಿ ಅಲ್ಲಿದೆ ಎಂದು ಹೇಳಿದರು.

ಯುದ್ಧದಲ್ಲಿ ಸೋಲಾದರೆ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನ ಕೊನೆಯವರೆಗೂ ಹೋರಾಟ ಮಾಡಲಿದೆ. ಭಾರತ ಮತ್ತು ಪಾಕ್​ ನಡುವೆ ಸಾಂಪ್ರದಾಯಿಕ ಯುದ್ಧ ಆರಂಭವಾದರೂ ಅದು ಅಣ್ವಸ್ತ್ರಗಳ ಪ್ರಯೋಗದೊಂದಿಗೆ ಅಂತ್ಯವಾಗುವ ಸಾಧ್ಯತೆ ಇದೆ. ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್​ ಸೋಲುವ ಅಥವಾ ಶರಣಾಗುವ ಸ್ಥಿತಿ ತಲುಪಿದರೆ, ಕೊನೆಯ ಉಸಿರನವರೆಗೂ ಸ್ವಾತಂತ್ರ್ಯಕ್ಕಾಗಿ ಹೋರಾಡುವುದು ಶತಃಸಿದ್ಧ. ಹೀಗೆ ಕೊನೆ ಉಸಿರಿನವರೆಗಿನ ಹೋರಾಟದಲ್ಲಿ ಏನು ಬೇಕಾದರೂ ಆಗಬಹುದಾಗಿದೆ ಎಂಬುದನ್ನು ಎಲ್ಲರೂ ನೆನಪಿಟ್ಟುಕೊಳ್ಳಬೇಕು ಎಂದು ಇಮ್ರಾನ್​ ಎಚ್ಚರಿಸಿದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

10 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

10 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago