ಬೆಂಗಳೂರು: ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ. ಈ ಬಜೆಟ್ ನಿಂದ ಸಮಾಜದ ಯಾವ ವರ್ಗಕ್ಕೂ ಏನೂ ಪ್ರಯೋಜನವಿಲ್ಲ. ಇದು ಜನರಿಗೆ ವಿರುದ್ದವಾಗಿರುವ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.
ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಇವರು ಈ ವರ್ಷದ ಬಜೆಟ್ ನಲ್ಲಿ ರೈತರ ರಕ್ಷಣೆ ಮಾಡುವುದಕ್ಕೆ ಯಾವುದೇ ಯೋಜನೆ ಮಾಡಿಲ್ಲ, ಉದ್ಯೋಗ ಸೃಷ್ಟಿ ಮಾಡುವುದಕ್ಕೆ ಯಾವ ತರದ ಪ್ಲ್ಯಾನ್ ಕೂಡ ಇಲ್ಲ, ಯಾರು ಬ್ಯಾಂಕ್ ಗಳಿಂದ ತೊಂದರೆ ಅನುಭವಿಸುತ್ತಿದ್ದರು ಅಂಥವರಿಗೆ ಸರ್ಕಾರ ಯಾವ ಸಹಾಯವನ್ನೂ ಮಾಡಿಲ್ಲ, ಹೋದ ವರ್ಷ ಏನಿತ್ತೋ ಅದನ್ನೇ ಮತ್ತೆ ರಿಪೀಟ್ ಮಾಡಿದ್ದಾರೆ ಎಂದಿದ್ದಾರೆ.
20 ಲಕ್ಷ ಕೋಟಿ ಯ ಬಜೆಟ್ ಯಾರು ಯಾರಿಗೆ ಎಷ್ಟೆಷ್ಟು ತಲುಪಿದೆ ಎಂದು ಹೇಳಿಲ್ಲ ಎಂದಿರುವ ಇವರು, ರೈಲ್ವೇಯಲ್ಲೂ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಪೆಟ್ರೋಲ್ ಡೀಸೆಲ್ ಬೆಲೆ ಮೇಲೆ ಹೆಚ್ಚಿನ ಟ್ಯಾಕ್ಸ್ ಹಾಕುವ ಮೂಲಕ ಸಾಮಾನ್ಯ ಜನರ ಮೇಲೆ ದೊಡ್ಡ ಭಾರ ಹಾಕಿದ್ದಾರೆ. ಈ ವರ್ಷದ ಬಜೆಟ್ ನಿಂದ ಯಾವ ತರಹದ ಅನುಕೂಲ ಕೂಡ ಇಲ್ಲ ಎಂದು ಟೀಕಿಸಿದ್ದಾರೆ.
ಈ ಬಜೆಟ್ ನಿಂದಾಗಿ ಆರ್ಥಿಕ ಸಮಸ್ಯೆ ವೃದ್ದಿಯಾಗುವ ಸಾಧ್ಯತೆ ಇದ್ದು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಕುಂದಾಪುರ : ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…