ಬೆಂಗಳೂರು: ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ. ಈ ಬಜೆಟ್ ನಿಂದ ಸಮಾಜದ ಯಾವ ವರ್ಗಕ್ಕೂ ಏನೂ ಪ್ರಯೋಜನವಿಲ್ಲ. ಇದು ಜನರಿಗೆ ವಿರುದ್ದವಾಗಿರುವ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.
ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಇವರು ಈ ವರ್ಷದ ಬಜೆಟ್ ನಲ್ಲಿ ರೈತರ ರಕ್ಷಣೆ ಮಾಡುವುದಕ್ಕೆ ಯಾವುದೇ ಯೋಜನೆ ಮಾಡಿಲ್ಲ, ಉದ್ಯೋಗ ಸೃಷ್ಟಿ ಮಾಡುವುದಕ್ಕೆ ಯಾವ ತರದ ಪ್ಲ್ಯಾನ್ ಕೂಡ ಇಲ್ಲ, ಯಾರು ಬ್ಯಾಂಕ್ ಗಳಿಂದ ತೊಂದರೆ ಅನುಭವಿಸುತ್ತಿದ್ದರು ಅಂಥವರಿಗೆ ಸರ್ಕಾರ ಯಾವ ಸಹಾಯವನ್ನೂ ಮಾಡಿಲ್ಲ, ಹೋದ ವರ್ಷ ಏನಿತ್ತೋ ಅದನ್ನೇ ಮತ್ತೆ ರಿಪೀಟ್ ಮಾಡಿದ್ದಾರೆ ಎಂದಿದ್ದಾರೆ.
20 ಲಕ್ಷ ಕೋಟಿ ಯ ಬಜೆಟ್ ಯಾರು ಯಾರಿಗೆ ಎಷ್ಟೆಷ್ಟು ತಲುಪಿದೆ ಎಂದು ಹೇಳಿಲ್ಲ ಎಂದಿರುವ ಇವರು, ರೈಲ್ವೇಯಲ್ಲೂ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಪೆಟ್ರೋಲ್ ಡೀಸೆಲ್ ಬೆಲೆ ಮೇಲೆ ಹೆಚ್ಚಿನ ಟ್ಯಾಕ್ಸ್ ಹಾಕುವ ಮೂಲಕ ಸಾಮಾನ್ಯ ಜನರ ಮೇಲೆ ದೊಡ್ಡ ಭಾರ ಹಾಕಿದ್ದಾರೆ. ಈ ವರ್ಷದ ಬಜೆಟ್ ನಿಂದ ಯಾವ ತರಹದ ಅನುಕೂಲ ಕೂಡ ಇಲ್ಲ ಎಂದು ಟೀಕಿಸಿದ್ದಾರೆ.
ಈ ಬಜೆಟ್ ನಿಂದಾಗಿ ಆರ್ಥಿಕ ಸಮಸ್ಯೆ ವೃದ್ದಿಯಾಗುವ ಸಾಧ್ಯತೆ ಇದ್ದು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಕುಂದಾಪುರ : ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ -Vishwanews24
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…