ಬೆಂಗಳೂರು: ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ. ಈ ಬಜೆಟ್ ನಿಂದ ಸಮಾಜದ ಯಾವ ವರ್ಗಕ್ಕೂ ಏನೂ ಪ್ರಯೋಜನವಿಲ್ಲ. ಇದು ಜನರಿಗೆ ವಿರುದ್ದವಾಗಿರುವ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.
ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಇವರು ಈ ವರ್ಷದ ಬಜೆಟ್ ನಲ್ಲಿ ರೈತರ ರಕ್ಷಣೆ ಮಾಡುವುದಕ್ಕೆ ಯಾವುದೇ ಯೋಜನೆ ಮಾಡಿಲ್ಲ, ಉದ್ಯೋಗ ಸೃಷ್ಟಿ ಮಾಡುವುದಕ್ಕೆ ಯಾವ ತರದ ಪ್ಲ್ಯಾನ್ ಕೂಡ ಇಲ್ಲ, ಯಾರು ಬ್ಯಾಂಕ್ ಗಳಿಂದ ತೊಂದರೆ ಅನುಭವಿಸುತ್ತಿದ್ದರು ಅಂಥವರಿಗೆ ಸರ್ಕಾರ ಯಾವ ಸಹಾಯವನ್ನೂ ಮಾಡಿಲ್ಲ, ಹೋದ ವರ್ಷ ಏನಿತ್ತೋ ಅದನ್ನೇ ಮತ್ತೆ ರಿಪೀಟ್ ಮಾಡಿದ್ದಾರೆ ಎಂದಿದ್ದಾರೆ.
20 ಲಕ್ಷ ಕೋಟಿ ಯ ಬಜೆಟ್ ಯಾರು ಯಾರಿಗೆ ಎಷ್ಟೆಷ್ಟು ತಲುಪಿದೆ ಎಂದು ಹೇಳಿಲ್ಲ ಎಂದಿರುವ ಇವರು, ರೈಲ್ವೇಯಲ್ಲೂ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಪೆಟ್ರೋಲ್ ಡೀಸೆಲ್ ಬೆಲೆ ಮೇಲೆ ಹೆಚ್ಚಿನ ಟ್ಯಾಕ್ಸ್ ಹಾಕುವ ಮೂಲಕ ಸಾಮಾನ್ಯ ಜನರ ಮೇಲೆ ದೊಡ್ಡ ಭಾರ ಹಾಕಿದ್ದಾರೆ. ಈ ವರ್ಷದ ಬಜೆಟ್ ನಿಂದ ಯಾವ ತರಹದ ಅನುಕೂಲ ಕೂಡ ಇಲ್ಲ ಎಂದು ಟೀಕಿಸಿದ್ದಾರೆ.
ಈ ಬಜೆಟ್ ನಿಂದಾಗಿ ಆರ್ಥಿಕ ಸಮಸ್ಯೆ ವೃದ್ದಿಯಾಗುವ ಸಾಧ್ಯತೆ ಇದ್ದು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಕುಂದಾಪುರ : ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ -Vishwanews24
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…