Featured

ಭಾರತದ ಕ್ರಿಕೆಟ್‍ಗೆ ನೀಡಿದ ಕೊಡುಗೆ ಅದ್ಭುತವಾದದ್ದು , ರಾಷ್ಟ್ರಕ್ಕಾಗಿ ಒಳ್ಳೆಯ ಸಾಧನೆಯನ್ನು ಮಾಡಿದ್ದಾರೆ: ಧೋನಿಗೆ ಪ್ರಧಾನಿ ಮೋದಿ -Vishwanews24

ನವದೆಹಲಿ: ಭಾರತ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದು,  ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಾಡಿಹೊಗಳಿದ್ದಾರೆ.

ನಾಯಕ ಎಂಎಸ್ ಧೋನಿಯವರು ಅಗಸ್ಟ್ 15ರಂದು ನಿವೃತ್ತಿ ಘೋಷಿಸಿದ್ದರು. ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿ ತಮ್ಮ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.

ಧೋನಿಯವರಿಗೆ ಪತ್ರ ಬರೆದಿರುವ ಮೋದಿಯವರು, ಧೋನಿಯವರು ಭಾರತದ ಕ್ರಿಕೆಟ್‍ಗೆ ನೀಡಿದ ಕೊಡುಗೆ ಅದ್ಭುತವಾದದ್ದು. ಕ್ರಿಕೆಟ್‍ನಲ್ಲಿ ಧೋನಿಯವರನ್ನು ಇಷ್ಟಪಡದವರನ್ನು ಹುಡುಕುವುದು ಕಷ್ಟ ಎಂದು ಮೋದಿಯವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜೊತೆಗೆ ಧೋನಿ ಸೇನೆಗೆ ಸೇರಿದ ವಿಚಾರದ ಬಗ್ಗೆ ಪತ್ರದಲ್ಲಿ ಬರೆದಿರುವ ಮೋದಿಯವರು, ಧೋನಿಯವರಿಗೆ ಭಾರತೀಯ ಸೇನೆಯ ಮೇಲೆ ಇರುವ ಪ್ರೀತಿ ಅಪಾರವಾದದ್ದು ಎಂದಿದ್ದಾರೆ. ಜೊತೆಗೆ ಧೋನಿಯವರು ಸಣ್ಣ ಪಟ್ಟಣದಲ್ಲಿ ಹುಟ್ಟಿ ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ರಾಷ್ಟ್ರಕ್ಕಾಗಿ ಒಳ್ಳೆಯ ಸಾಧನೆಯನ್ನು ಮಾಡಿದ್ದಾರೆ. ಈಗಿನ ಯುವಜನತೆ ಸ್ಪೂರ್ತಿಯಾಗಿದ್ದಾರೆ. ಧೋನಿಯವರ ಸಾಧನೆಯನ್ನು 130 ಕೋಟಿ ಭಾರತೀಯರು ಮೆಚ್ಚಿಕೊಳ್ಳಬೇಕು ಎಂದಿದ್ದಾರೆ.

ಧೋನಿಯವರು ವೃತ್ತಿಪರ ಜೀವನ ಮತ್ತು ವೈಯಕ್ತಿಕ ಜೀವನವನ್ನು ಸರಿಯಾಗಿ ಬ್ಯಾಲೆನ್ಸ್ ಮಾಡಿದ್ದಾರೆ. ಜೊತೆಗೆ 2011ರ ವಿಶ್ವಕಪ್‍ನಲ್ಲಿ ಅವರು ಕೂಲ್ ಆಗಿ ಆಡಿ ಕಪ್ ಅನ್ನು ಗೆದ್ದುಕೊಟ್ಟಿದ್ದಾರೆ. 2007ರ ಟಿ-20 ವಿಶ್ವಕಪ್ ಅನ್ನು ಗೆದ್ದು ಅವರಲ್ಲಿರುವ ಛಲವನ್ನು ತೋರಿಸಿದ್ದಾರೆ. ಇಂಥಹ ಅದ್ಭುತ ಕ್ರೀಡಾಪಟುವಿನ ನಿವೃತ್ತಿ ನಂತರದ ಜೀವನ ಚೆನ್ನಾಗಿರಲಿ. ಮುಂದೆ ಅವರು ತಮ್ಮ ಕುಟುಂಬದ ಜೊತೆ ಉತ್ತಮವಾದ ಸಮಯವನ್ನು ಕಳೆಯಲಿ ಎಂದು ಮೋದಿಯವರು ಪತ್ರದ ಮೂಲಕ ಶುಭಕೋರಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago