Featured

ಭಾರತದ ಕ್ರಿಕೆಟ್‍ಗೆ ನೀಡಿದ ಕೊಡುಗೆ ಅದ್ಭುತವಾದದ್ದು , ರಾಷ್ಟ್ರಕ್ಕಾಗಿ ಒಳ್ಳೆಯ ಸಾಧನೆಯನ್ನು ಮಾಡಿದ್ದಾರೆ: ಧೋನಿಗೆ ಪ್ರಧಾನಿ ಮೋದಿ -Vishwanews24

ನವದೆಹಲಿ: ಭಾರತ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದು,  ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಾಡಿಹೊಗಳಿದ್ದಾರೆ.

ನಾಯಕ ಎಂಎಸ್ ಧೋನಿಯವರು ಅಗಸ್ಟ್ 15ರಂದು ನಿವೃತ್ತಿ ಘೋಷಿಸಿದ್ದರು. ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿ ತಮ್ಮ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.

ಧೋನಿಯವರಿಗೆ ಪತ್ರ ಬರೆದಿರುವ ಮೋದಿಯವರು, ಧೋನಿಯವರು ಭಾರತದ ಕ್ರಿಕೆಟ್‍ಗೆ ನೀಡಿದ ಕೊಡುಗೆ ಅದ್ಭುತವಾದದ್ದು. ಕ್ರಿಕೆಟ್‍ನಲ್ಲಿ ಧೋನಿಯವರನ್ನು ಇಷ್ಟಪಡದವರನ್ನು ಹುಡುಕುವುದು ಕಷ್ಟ ಎಂದು ಮೋದಿಯವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜೊತೆಗೆ ಧೋನಿ ಸೇನೆಗೆ ಸೇರಿದ ವಿಚಾರದ ಬಗ್ಗೆ ಪತ್ರದಲ್ಲಿ ಬರೆದಿರುವ ಮೋದಿಯವರು, ಧೋನಿಯವರಿಗೆ ಭಾರತೀಯ ಸೇನೆಯ ಮೇಲೆ ಇರುವ ಪ್ರೀತಿ ಅಪಾರವಾದದ್ದು ಎಂದಿದ್ದಾರೆ. ಜೊತೆಗೆ ಧೋನಿಯವರು ಸಣ್ಣ ಪಟ್ಟಣದಲ್ಲಿ ಹುಟ್ಟಿ ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ರಾಷ್ಟ್ರಕ್ಕಾಗಿ ಒಳ್ಳೆಯ ಸಾಧನೆಯನ್ನು ಮಾಡಿದ್ದಾರೆ. ಈಗಿನ ಯುವಜನತೆ ಸ್ಪೂರ್ತಿಯಾಗಿದ್ದಾರೆ. ಧೋನಿಯವರ ಸಾಧನೆಯನ್ನು 130 ಕೋಟಿ ಭಾರತೀಯರು ಮೆಚ್ಚಿಕೊಳ್ಳಬೇಕು ಎಂದಿದ್ದಾರೆ.

ಧೋನಿಯವರು ವೃತ್ತಿಪರ ಜೀವನ ಮತ್ತು ವೈಯಕ್ತಿಕ ಜೀವನವನ್ನು ಸರಿಯಾಗಿ ಬ್ಯಾಲೆನ್ಸ್ ಮಾಡಿದ್ದಾರೆ. ಜೊತೆಗೆ 2011ರ ವಿಶ್ವಕಪ್‍ನಲ್ಲಿ ಅವರು ಕೂಲ್ ಆಗಿ ಆಡಿ ಕಪ್ ಅನ್ನು ಗೆದ್ದುಕೊಟ್ಟಿದ್ದಾರೆ. 2007ರ ಟಿ-20 ವಿಶ್ವಕಪ್ ಅನ್ನು ಗೆದ್ದು ಅವರಲ್ಲಿರುವ ಛಲವನ್ನು ತೋರಿಸಿದ್ದಾರೆ. ಇಂಥಹ ಅದ್ಭುತ ಕ್ರೀಡಾಪಟುವಿನ ನಿವೃತ್ತಿ ನಂತರದ ಜೀವನ ಚೆನ್ನಾಗಿರಲಿ. ಮುಂದೆ ಅವರು ತಮ್ಮ ಕುಟುಂಬದ ಜೊತೆ ಉತ್ತಮವಾದ ಸಮಯವನ್ನು ಕಳೆಯಲಿ ಎಂದು ಮೋದಿಯವರು ಪತ್ರದ ಮೂಲಕ ಶುಭಕೋರಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago