ಶ್ರೀನಗರ,: ಇದೀಗ ಬಂದಿರುವ ಸುದ್ದಿಯ ಪ್ರಕಾರ, ಪಾಕಿಸ್ತಾನದ ವಾಯು ಸೇನೆಯ ಎಫ್-16 ಯುದ್ಧ ವಿಮಾನವನ್ನು ಭಾರತದ ವಾಯು ಸೇನೆಯ ಸುಖೋಯ್-30 ಯುದ್ಧ ವಿಮಾನ ಹೊಡೆದುರುಳಿಸಿದೆ.
ನೌಶೇರಾದ ಲಾಮ್ ಸೆಕ್ಟರ್ ನಲ್ಲಿ ಲಾಮ್ ವ್ಯಾಲಿ ನಲ್ಲಿ ಈ ಘಟನೆ ನಡೆದಿದೆ. ಆದರೆ, ಹೊಡೆದುರುಳಿಸಲಾದ ಯುದ್ಧ ವಿಮಾನದಿಂದ ಪೈಲಟ್ ಪ್ಯಾರಾಶೂಟ್ ಬಳಸಿ ಜಿಗಿದಿದ್ದು, ಆತನ ಪರಿಸ್ಥಿತಿಯ ಬಗ್ಗೆ ಮಾಹಿತಿ ಬಂದಿಲ್ಲ.
ಬಾಲಕೋಟ್, ಮುಜಫರಾಬಾದ್ ಮತ್ತು ಡಾಕೋಟಿಯಲ್ಲಿ ಭಾರತದ ವಾಯುಸೇನೆ ಮಂಗಳವಾರ ಉಗ್ರರ ನೆಲೆಗಳನ್ನು ನಾಶ ಮಾಡಿದ ಮೇಲೆ ಪಾಕಿಸ್ತಾನ ಪ್ರಥಮ ಬಾರಿಗೆ ಪ್ರತಿದಾಳಿ ಮಾಡಿದೆ.
ಭಾರತದ ಸೇನಾಪಡೆ ಕೂಡ ಸಂಪೂರ್ಣ ಸಿದ್ಧತೆಯಲ್ಲಿದ್ದು, ಈ ದಾಳಿಗೆ ಕೂಡ ತಿರುಗೇಟು ನೀಡಲು ತಯಾರಾಗಿದೆ. ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಹಲವಾರು ರಾಷ್ಟ್ರಗಳು ಪ್ರತಿದಾಳಿ ನಡೆಸದಂತೆ ಪಾಕಿಸ್ತಾನಕ್ಕೆ ಕಿವಿಮಾತು ಹೇಳಿದ್ದರೂ ಪಾಕ್ ಕೇಳುವ ಸ್ಥಿತಿಯಲ್ಲಿ ಇಲ್ಲ. ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತೆ ವರ್ತಿಸುತ್ತಿದೆ.
ಭಾರತದ ವಾಯು ಸೀಮೆ ನಿಮಯವನ್ನು ಉಲ್ಲಂಘಿಸಿರುವ ಪಾಕಿಸ್ತಾನದ ವಿಮಾನಗಳು, ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿರುವ ನೌಶೇರಾದಲ್ಲಿ ಬಾಂಬ್ ದಾಳಿ ನಡೆಸಿವೆ. ಭಾರತದ ವಾಯು ಸೇನೆ ಪಾಕ್ ಯುದ್ಧ ವಿಮಾನಗಳನ್ನು ಹಿಮ್ಮೆಟ್ಟಿಸುವಲ್ಲಿ ಸಫಲವಾದರೂ, ಬಾಂಬ್ ಎಸೆದು ಪರಾರಿಯಾಗಿವೆ. ರಾಯ್ಟರ್ಸ್ ಸುದ್ದಿ ಏಜೆನ್ಸಿ ಪ್ರಕಾರ, ಕನಿಷ್ಠ ಮೂರು ಯದ್ಧ ವಿಮಾನಗಳು ಭಾರತದ ಗಡಿಯನ್ನು ಪ್ರವೇಶಿಸಿದ್ದವು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…