ಭಾರತದ ಗಡಿ ದಾಟಿ ಬರುವ ಉಗ್ರರಿಗೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಸಾವು ಖಚಿತ : ಉಗ್ರರಿಗೆ ಬಿಪಿನ್ ರಾವತ್ ಎಚ್ಚರಿಕೆ -Vishwanews24
ನವದೆಹಲಿ : ಭಾರತದ ಗಡಿಯಲ್ಲಿ ಶಾಂತಿಯನ್ನು ಹಾಳು ಮಾಡಲು ಬಯಸುವ ಯಾರೇ ಆದರೂ ಅಂತವರಿಗೆ ಸಾವು ಖಚಿತ, ಪಾಕ್ ಬೆಂಬಲಿತ ಉಗ್ರರ ಜೊತೆಗೆ ಕಣ್ಣಾ ಮುಚ್ಚಾಲೆ ಆಡುವುದು ಸಾಧ್ಯವಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಗಡಿ ಪ್ರದೇಶದಲ್ಲಿ ಉಗ್ರ ಚಟುವಟಿಕೆಗಳನ್ನು ಇನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ. ಉಗ್ರರ ಜೊತೆಗೆ ಕಣ್ಣಾ ಮುಚ್ಚಾಲೆ ಆಟ ಆಡುವುದಕ್ಕೂ ನಾವು ಸಿದ್ಧರಿಲ್ಲ. ಗಡಿ ದಾಟಿ ಬರುವ ಉಗ್ರರಿಗೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಸಾವು ಖಚಿತ ಎಂದು ಹೇಳಿದ್ದಾರೆ.
ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಮಾಡಿದ ಬಳಿಕ ಗಡಿಯಲ್ಲಿ ಪಾಕ್ ಉಗ್ರರು ಜಿಹಾದ್ ಗೆ ಕರೆ ನೀಡಿದ್ದಾರೆ. ಪಾಕಿಸ್ತಾನದ ಸೇನಾ ಮುಖ್ಯಸ್ಥರು ಉಗ್ರಗಾಮಿಗಳಿಗೆ, ಭಯೋತ್ಪಾದನೆಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಗಡಿ ಭಾಗದಲ್ಲಿ ಶಾಂತಿ ಕದಡಿದಂತಾಗಿದೆ. ಈ ಮೂಲಕ ಪಾಕಿಸ್ತಾನ ಪರೋಕ್ಷ ಯುದ್ಧಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.
