ನವದೆಹಲಿ : ಭಾರತದ ಗಡಿಯಲ್ಲಿ ಶಾಂತಿಯನ್ನು ಹಾಳು ಮಾಡಲು ಬಯಸುವ ಯಾರೇ ಆದರೂ ಅಂತವರಿಗೆ ಸಾವು ಖಚಿತ, ಪಾಕ್ ಬೆಂಬಲಿತ ಉಗ್ರರ ಜೊತೆಗೆ ಕಣ್ಣಾ ಮುಚ್ಚಾಲೆ ಆಡುವುದು ಸಾಧ್ಯವಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಗಡಿ ಪ್ರದೇಶದಲ್ಲಿ ಉಗ್ರ ಚಟುವಟಿಕೆಗಳನ್ನು ಇನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ. ಉಗ್ರರ ಜೊತೆಗೆ ಕಣ್ಣಾ ಮುಚ್ಚಾಲೆ ಆಟ ಆಡುವುದಕ್ಕೂ ನಾವು ಸಿದ್ಧರಿಲ್ಲ. ಗಡಿ ದಾಟಿ ಬರುವ ಉಗ್ರರಿಗೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಸಾವು ಖಚಿತ ಎಂದು ಹೇಳಿದ್ದಾರೆ.
ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಮಾಡಿದ ಬಳಿಕ ಗಡಿಯಲ್ಲಿ ಪಾಕ್ ಉಗ್ರರು ಜಿಹಾದ್ ಗೆ ಕರೆ ನೀಡಿದ್ದಾರೆ. ಪಾಕಿಸ್ತಾನದ ಸೇನಾ ಮುಖ್ಯಸ್ಥರು ಉಗ್ರಗಾಮಿಗಳಿಗೆ, ಭಯೋತ್ಪಾದನೆಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಗಡಿ ಭಾಗದಲ್ಲಿ ಶಾಂತಿ ಕದಡಿದಂತಾಗಿದೆ. ಈ ಮೂಲಕ ಪಾಕಿಸ್ತಾನ ಪರೋಕ್ಷ ಯುದ್ಧಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…