ನವದೆಹಲಿ : ಭಾರತದ ಗಡಿಯಲ್ಲಿ ಶಾಂತಿಯನ್ನು ಹಾಳು ಮಾಡಲು ಬಯಸುವ ಯಾರೇ ಆದರೂ ಅಂತವರಿಗೆ ಸಾವು ಖಚಿತ, ಪಾಕ್ ಬೆಂಬಲಿತ ಉಗ್ರರ ಜೊತೆಗೆ ಕಣ್ಣಾ ಮುಚ್ಚಾಲೆ ಆಡುವುದು ಸಾಧ್ಯವಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಗಡಿ ಪ್ರದೇಶದಲ್ಲಿ ಉಗ್ರ ಚಟುವಟಿಕೆಗಳನ್ನು ಇನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ. ಉಗ್ರರ ಜೊತೆಗೆ ಕಣ್ಣಾ ಮುಚ್ಚಾಲೆ ಆಟ ಆಡುವುದಕ್ಕೂ ನಾವು ಸಿದ್ಧರಿಲ್ಲ. ಗಡಿ ದಾಟಿ ಬರುವ ಉಗ್ರರಿಗೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಸಾವು ಖಚಿತ ಎಂದು ಹೇಳಿದ್ದಾರೆ.
ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಮಾಡಿದ ಬಳಿಕ ಗಡಿಯಲ್ಲಿ ಪಾಕ್ ಉಗ್ರರು ಜಿಹಾದ್ ಗೆ ಕರೆ ನೀಡಿದ್ದಾರೆ. ಪಾಕಿಸ್ತಾನದ ಸೇನಾ ಮುಖ್ಯಸ್ಥರು ಉಗ್ರಗಾಮಿಗಳಿಗೆ, ಭಯೋತ್ಪಾದನೆಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಗಡಿ ಭಾಗದಲ್ಲಿ ಶಾಂತಿ ಕದಡಿದಂತಾಗಿದೆ. ಈ ಮೂಲಕ ಪಾಕಿಸ್ತಾನ ಪರೋಕ್ಷ ಯುದ್ಧಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…