ಈವರೆಗೂ ಭಾರತದ ಟಾಪ್ ನಟರ ಸ್ಥಾನದಲ್ಲಿ ಕನ್ನಡದ ನಟರಿಗೆ ಯಾವ ಸ್ಥಾನಗಳು ದೊರೆಯುತ್ತಿರಲಿಲ್ಲ. ಕೇವಲ ಬಾಲಿವುಡ್ ನಟರು ಮಾತ್ರ ಆ ಸ್ಥಾನಗಳಲ್ಲಿ ಮೆರೆಯುತ್ತಿದ್ದರು, ಹೆಚ್ಚೆಂದರೆ ತಮಿಳು ಮತ್ತು ತೆಲುಗು ನಟರು ಇರುತ್ತಿದ್ದರು. ಇದೀಗ ಕನ್ನಡದ ನಟರಿಗೂ ಅಲ್ಲಿ ಸ್ಥಾನ ಸಿಗುತ್ತಿದೆ. ಕೆಜಿಎಫ್ ಸಿನಿಮಾವೊಂದು ಇಂತಹ ಸ್ಥಾನ ದೊರೆಕಿಸಿ ಕೊಡಲು ಯಶ್ ಗೆ ನೆರವಾಗಿದೆ. ಹಾಗಾಗಿ ಯಶ್ ಭಾರತೀಯ ಟಾಪ್ ನಟರ ಯಾದಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರತಿ ವರ್ಷವೂ ಕೆಲ ಸಂಸ್ಥೆಗಳು ಭಾರತದ ಟಾಪ್ ನಟರ ಲಿಸ್ಟ್ ಅನ್ನು ಬಿಡುಗಡೆ ಮಾಡುತ್ತವೆ. ಈ ಬಾರಿ ಆಮ್ಯಾರ್ಕ್ಸ್ ಸಂಸ್ಥೆಯು ಟಾಪ್ ನಟರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ದಳಪತಿ ವಿಜಯ್ ಟಾಪ್ 1 ಸ್ಥಾನವನ್ನು ಪಡೆದುಕೊಂಡಿದ್ದರೆ, ಯಶ್ ಗೆ ಟಾಪ್ 5 ಸ್ಥಾನ ಸಿಕ್ಕಿದೆ. ಪ್ರಭಾಸ್ ಎರಡನೇ ಸ್ಥಾನ, ಜ್ಯೂನಿಯರ್ ಎನ್.ಟಿ.ಆರ್ ಮೂರನೇ ಸ್ಥಾನ ಹಾಗೂ ಅಲ್ಲು ಅರ್ಜುನ್ ನಾಲ್ಕನೇ ಸ್ಥಾನವನ್ನು ಪಡೆಯುವ ಮೂಲಕ ಟಾಪ್ 5 ಪಟ್ಟಿಯಲ್ಲಿ ದಕ್ಷಿಣದವರಿಗೆ ಸ್ಥಾನ ಸಿಕ್ಕಿದೆ.
ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮತ್ತೊಂದು ಅಚ್ಚರಿಯ ಸಂಗತಿಯಂದರೆ, ಬಾಲಿವುಡ್ ನಟರಲ್ಲಿ ಕೇವಲ ಅಕ್ಷಯ್ ಕುಮಾರ್ ಗೆ ಮಾತ್ರ ಸ್ಥಾನ ದೊರೆತಿದ್ದು ಆರನೇ ಸ್ಥಾನದಲ್ಲಿ ಅಕ್ಷಯ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಾಲಿವುಡ್ ನ ಖ್ಯಾತ ನಟರು ದೂರವೇ ಉಳಿಯುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಅಲ್ಲಿಗೆ ದಕ್ಷಿಣದವರೇ ಪ್ರಾಬಲ್ಯ ಮೆರೆದಿದ್ದಾರೆ. ಖಾನ್ ಪಡೆಯ ಒಬ್ಬನೇ ಒಬ್ಬ ನಟನೂ ಕೂಡ ಈ ಯಾದಿಯಲ್ಲಿ ಕಾಣಿಸಿಕೊಳ್ಳದೇ ಇರುವುದು ಅಚ್ಚರಿಗೆ ಕಾರಣವಾಗಿದೆ.
ಕೆಜಿಎಫ್ ಸಿನಿಮಾದ ಮೂಲಕ ಭಾರತೀಯ ಸಿನಿಮಾ ರಂಗದ ಗತಿಯನ್ನೇ ಬದಲಿಸಿರುವ ಯಶ್, ಯಾವುದೇ ಸಂಸ್ಥೆಗಳು ಟಾಪ್ ಪಟ್ಟಿಯನ್ನು ಬಿಡುಗಡೆ ಮಾಡಿದರೂ, ಅದರಲ್ಲಿ ಒಂದು ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸುತ್ತಿದ್ದಾರೆ.
ಇದನ್ನೂ ಓದಿ : ಮಲ್ಪೆ: ಅಪಾರ್ಟ್ಮೆಂಟ್ ನ ಮಹಡಿಯಲ್ಲಿ ಜೇನು ತೆಗೆಯುವುದನ್ನು ನೋಡುತ್ತಿದ್ದ ಬಾಲಕ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು – Vishwanews24
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…