ಕಲಬುರಗಿ: ಭಾರತದ ಪ್ರಧಾನಿಯಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೂಕ್ತವಲ್ಲ. ಅವರು ಇನ್ನೂ ಪ್ರಧಾನಿಯಾಗುವ ಮಟ್ಟಿಗೆ ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಮಾಲಕರೆಡ್ಡಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸೂಕ್ತವಲ್ಲ. ಅವರು ಪ್ರಧಾನಿ ಹುದ್ದೆ ನಿರ್ವಹಿಸಲು ಸಿದ್ಧರಾಗಿಲ್ಲ. ದೇಶದ ರಕ್ಷಣೆ ಮುಖ್ಯ, ಸದ್ಯ ಇರುವ ಪರಿಸ್ಥತಿಯಲ್ಲಿ ಮೋದಿ ಅವರು ದೇಶದ ರಕ್ಷಣಾ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ವಿಷಯದಲ್ಲಿ ನಾನು ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೆನೆ. ರಾಷ್ಟ್ರ ಮಟ್ಟದಲ್ಲಿ ರಾಜಕಾರಣ ಮಾಡಿ ಅನುಭವವಿರುವ ನಾಯಕರೇ ಮೋದಿ ನಾಯಕತ್ವವನ್ನು ಒಪ್ಪಿದ್ದಾರೆ ಎಂದು ಹೇಳಿದರು.
ನಾನು ಕಾಂಗ್ರೆಸ್ ಬಿಡುವುದಿಲ್ಲ. ಅನಾರೋಗ್ಯದ ಕಾರಣದಿಂದ ಚುನಾವಣೆ ವಿಚಾರದಲ್ಲಿ ದೂರವಿದ್ದೇನೆ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರಿಗೆ ರಾಜಕೀಯದ ಮೇಲಿದ್ದ ಜಾಣ್ಮೆ ರಾಹುಲ್ ಅವರಲ್ಲಿ ನಾನು ಕಂಡಿಲ್ಲ. ಅವರು ಇನ್ನೂ ರಾಜಕೀಯದಲ್ಲಿರುವ ಅನುಭವ ಸಾಲದು. ನಾನು ಖರ್ಗೆ ಪರ ಪ್ರಚಾರ ಮಾಡಲ್ಲ, ಪಕ್ಷದ ಪರವಾಗಿ ಪ್ರಚಾರ ಮಾಡುತ್ತೆನೆ. ಯಾಕೆಂದರೆ ಇತ್ತೀಚಿಗೆ ಕ್ಷೇತ್ರದಲ್ಲಿ ಖರ್ಗೆಯವರ ವರ್ಚಸ್ಸು ಕಡಿಮೆ ಆಗಿದೆ. ಅದಕ್ಕಾಗಿ ಖರ್ಗೆ ಆಪ್ತರು ಅವರನ್ನು ಬಿಟ್ಟು ಹೋಗುತ್ತಿದ್ದಾರೆ. ನಾನು ಖರ್ಗೆಯ ನಾಯಕತ್ವ ಸಹ ಒಪ್ಪಲ್ಲ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…