ಕಲಬುರಗಿ: ಭಾರತದ ಪ್ರಧಾನಿಯಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೂಕ್ತವಲ್ಲ. ಅವರು ಇನ್ನೂ ಪ್ರಧಾನಿಯಾಗುವ ಮಟ್ಟಿಗೆ ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಮಾಲಕರೆಡ್ಡಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸೂಕ್ತವಲ್ಲ. ಅವರು ಪ್ರಧಾನಿ ಹುದ್ದೆ ನಿರ್ವಹಿಸಲು ಸಿದ್ಧರಾಗಿಲ್ಲ. ದೇಶದ ರಕ್ಷಣೆ ಮುಖ್ಯ, ಸದ್ಯ ಇರುವ ಪರಿಸ್ಥತಿಯಲ್ಲಿ ಮೋದಿ ಅವರು ದೇಶದ ರಕ್ಷಣಾ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ವಿಷಯದಲ್ಲಿ ನಾನು ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೆನೆ. ರಾಷ್ಟ್ರ ಮಟ್ಟದಲ್ಲಿ ರಾಜಕಾರಣ ಮಾಡಿ ಅನುಭವವಿರುವ ನಾಯಕರೇ ಮೋದಿ ನಾಯಕತ್ವವನ್ನು ಒಪ್ಪಿದ್ದಾರೆ ಎಂದು ಹೇಳಿದರು.
ನಾನು ಕಾಂಗ್ರೆಸ್ ಬಿಡುವುದಿಲ್ಲ. ಅನಾರೋಗ್ಯದ ಕಾರಣದಿಂದ ಚುನಾವಣೆ ವಿಚಾರದಲ್ಲಿ ದೂರವಿದ್ದೇನೆ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರಿಗೆ ರಾಜಕೀಯದ ಮೇಲಿದ್ದ ಜಾಣ್ಮೆ ರಾಹುಲ್ ಅವರಲ್ಲಿ ನಾನು ಕಂಡಿಲ್ಲ. ಅವರು ಇನ್ನೂ ರಾಜಕೀಯದಲ್ಲಿರುವ ಅನುಭವ ಸಾಲದು. ನಾನು ಖರ್ಗೆ ಪರ ಪ್ರಚಾರ ಮಾಡಲ್ಲ, ಪಕ್ಷದ ಪರವಾಗಿ ಪ್ರಚಾರ ಮಾಡುತ್ತೆನೆ. ಯಾಕೆಂದರೆ ಇತ್ತೀಚಿಗೆ ಕ್ಷೇತ್ರದಲ್ಲಿ ಖರ್ಗೆಯವರ ವರ್ಚಸ್ಸು ಕಡಿಮೆ ಆಗಿದೆ. ಅದಕ್ಕಾಗಿ ಖರ್ಗೆ ಆಪ್ತರು ಅವರನ್ನು ಬಿಟ್ಟು ಹೋಗುತ್ತಿದ್ದಾರೆ. ನಾನು ಖರ್ಗೆಯ ನಾಯಕತ್ವ ಸಹ ಒಪ್ಪಲ್ಲ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…