ಕಲಬುರಗಿ: ಭಾರತದ ಪ್ರಧಾನಿಯಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೂಕ್ತವಲ್ಲ. ಅವರು ಇನ್ನೂ ಪ್ರಧಾನಿಯಾಗುವ ಮಟ್ಟಿಗೆ ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಮಾಲಕರೆಡ್ಡಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸೂಕ್ತವಲ್ಲ. ಅವರು ಪ್ರಧಾನಿ ಹುದ್ದೆ ನಿರ್ವಹಿಸಲು ಸಿದ್ಧರಾಗಿಲ್ಲ. ದೇಶದ ರಕ್ಷಣೆ ಮುಖ್ಯ, ಸದ್ಯ ಇರುವ ಪರಿಸ್ಥತಿಯಲ್ಲಿ ಮೋದಿ ಅವರು ದೇಶದ ರಕ್ಷಣಾ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ವಿಷಯದಲ್ಲಿ ನಾನು ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೆನೆ. ರಾಷ್ಟ್ರ ಮಟ್ಟದಲ್ಲಿ ರಾಜಕಾರಣ ಮಾಡಿ ಅನುಭವವಿರುವ ನಾಯಕರೇ ಮೋದಿ ನಾಯಕತ್ವವನ್ನು ಒಪ್ಪಿದ್ದಾರೆ ಎಂದು ಹೇಳಿದರು.
ನಾನು ಕಾಂಗ್ರೆಸ್ ಬಿಡುವುದಿಲ್ಲ. ಅನಾರೋಗ್ಯದ ಕಾರಣದಿಂದ ಚುನಾವಣೆ ವಿಚಾರದಲ್ಲಿ ದೂರವಿದ್ದೇನೆ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರಿಗೆ ರಾಜಕೀಯದ ಮೇಲಿದ್ದ ಜಾಣ್ಮೆ ರಾಹುಲ್ ಅವರಲ್ಲಿ ನಾನು ಕಂಡಿಲ್ಲ. ಅವರು ಇನ್ನೂ ರಾಜಕೀಯದಲ್ಲಿರುವ ಅನುಭವ ಸಾಲದು. ನಾನು ಖರ್ಗೆ ಪರ ಪ್ರಚಾರ ಮಾಡಲ್ಲ, ಪಕ್ಷದ ಪರವಾಗಿ ಪ್ರಚಾರ ಮಾಡುತ್ತೆನೆ. ಯಾಕೆಂದರೆ ಇತ್ತೀಚಿಗೆ ಕ್ಷೇತ್ರದಲ್ಲಿ ಖರ್ಗೆಯವರ ವರ್ಚಸ್ಸು ಕಡಿಮೆ ಆಗಿದೆ. ಅದಕ್ಕಾಗಿ ಖರ್ಗೆ ಆಪ್ತರು ಅವರನ್ನು ಬಿಟ್ಟು ಹೋಗುತ್ತಿದ್ದಾರೆ. ನಾನು ಖರ್ಗೆಯ ನಾಯಕತ್ವ ಸಹ ಒಪ್ಪಲ್ಲ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…