ಯಮನಶಿ(ಜಪಾನ್)/: “ಭಾರತದ ಪ್ರಧಾನಿ ಮೋದಿ ನನ್ನ ಅತ್ಯಂತ ಭರವಸೆಯ ಗೆಳೆಯ…’ ಇದು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಮೋದಿ ಕುರಿತಂತೆ ಮಾಡಿರುವ ಗುಣಗಾನ. ಭಾರತವನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದಿರುವ ಅಬೆ, ತಮ್ಮ ಅಜ್ಜನ ಕಾಲದಿಂದಲೂ ಈ ದೇಶ ನನ್ನ ನೆಚ್ಚಿನದ್ದಾಗಿದೆ ಎಂದಿದ್ದಾರೆ. 1957ರಲ್ಲಿ ಅಬೆ ಅವರ ತಾತ ನಬುಸುಕೆ ಕಿಶಿ ಅವರು ಜಪಾನ್ ಪ್ರಧಾನಿಯಾಗಿದ್ದ ವೇಳೆ ಭಾರತಕ್ಕೆ ಬಂದಿದ್ದರು. ಆಗ ಪ್ರಧಾನಿಯಾಗಿದ್ದ ಜವಾಹರ್ ಲಾಲ್ ನೆಹರೂ ಅವರು ತೋರಿದ್ದ ಪ್ರೀತಿಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಭಾರತದ ಪತ್ರಿಕೆಗಳಿಗೆ ನೀಡಿರುವ ಸಂದೇಶ ರೂಪದ ಜಾಹೀರಾತಿನಲ್ಲಿ ಕೊಂಡಾಡಿದ್ದಾರೆ.
ಭಾರತ ಮತ್ತು ಜಪಾನ್ ದೇಶಗಳು ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವ ಸಾಮರ್ಥ್ಯ ಹೊಂದಿವೆ. ಭಾರತದ ಆರ್ಥಿಕ ಬೆಳವಣಿಗೆಗಾಗಿ ಎಲ್ಲ ರೀತಿಯ ನೆರವು ನೀಡುವುದಾಗಿ ಹೇಳಿದ ಅಬೆ ಅವರು, ಮೋದಿ ಅವರ ಮೇಕ್ ಇನ್ ಇಂಡಿಯಾಗಾಗಿ ಸಹಾಯ ಒದಗಿಸುವ ಭರವಸೆ ನೀಡಿದರು. ಇದಕ್ಕೆ ಹೈಸ್ಪೀಡ್ ರೈಲು, ಸಬ್ವೇಗಳು, ಇತರ ಮೂಲಸೌಕರ್ಯ, ಜಪಾನ್ನ ತಂತ್ರಜ್ಞಾನವನ್ನು ಪಸರಿಸುವ ಕೆಲಸ ಮಾಡುತ್ತೇವೆ ಎಂದೂ ಹೇಳಿದರು. ಮುಂಬಯಿ-ಅಹ್ಮದಾಬಾದ್ನ ಬುಲೆಟ್ ಟ್ರೈನ್ ಯೋಜನೆ ಮುಗಿದ ಮೇಲೆ ಭಾರತ-ಜಪಾನ್ ನಡುವೆ ಹೊಸ ಅಧ್ಯಾಯವೇ ಶುರುವಾಗಲಿದೆ ಎಂದೂ ಅಬೆ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…