Featured

ಭಾರತದ ಪ್ರಧಾನಿ ಮೋದಿ ನನ್ನ ಪ್ರೀತಿಯ ಸ್ನೇಹಿತ, ಅವರೆಂದರೆ ನನಗಿಷ್ಟ’ , ಮೋದಿಯನ್ನು ಕೊಂಡಾಡಿದ ಟ್ರಂಪ್​

ವಾಷಿಂಗ್ಟನ್​: ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ ಪ್ರೀತಿಯ ಸ್ನೇಹಿತ. ನಾನು ಅವರನ್ನು ತುಂಬ ಇಷ್ಟಪಡುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿದ್ದಾಗಿ ಪತ್ರಕರ್ತ ಬಾಬ್​ವುಡ್​ವಾರ್ಡ್​ ಎಂಬುವರು ತಮ್ಮ ಇತ್ತೀಚಿಗಿನ ಪುಸ್ತಕ ‘ಫಿಯರ್​: ಟ್ರಂಪ್​ ಇನ್​ ದಿ ವೈಟ್​ ಹೌಸ್​’ನಲ್ಲಿ ಉಲ್ಲೇಖಿಸಿದ್ದಾರೆ.

ಟ್ರಂಪ್​ ಅವರು ಕಳೆದ ವರ್ಷದ ಜುಲೈ 19ರಂದು ನಡೆದ ಸಭೆಯಲ್ಲಿ ಮೋದಿಯರವನ್ನು ಹೊಗಳಿದ್ದಾರೆ. ಅದಕ್ಕೂ ಮೊದಲು ಜೂ.26ರಂದು ವೈಟ್​ಹೌಸ್​ನಲ್ಲಿ ಭಾರತದ ಪ್ರಧಾನಿ ಜತೆ ದೀರ್ಘ ಚರ್ಚೆ ನಡೆಸಿದ್ದರು. ” ಅಮೆರಿಕಕ್ಕೆ ಅಫ್ಘಾನಿಸ್ತಾನದಿಂದ ಏನೂ ಸಹಾಯವಾಗುತ್ತಿಲ್ಲ. ಆದರೂ ಅಲ್ಲಿನ ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತದೆ. ಅಫ್ಘಾನಿಸ್ತಾನದಲ್ಲಿ ಅಪಾರ ಖನಿಜ ಸಂಪತ್ತು ಇದೆ. ಆದರೆ ಅದರಿಂದ ಯುಎಸ್​ಗೆ ಉಪಯೋಗವಾಗುತ್ತಿಲ್ಲ. ಅದನ್ನು ಬಳಸಿಕೊಳ್ಳಬೇಕು ಎಂದು ಮೋದಿ ನನಗೆ ಹೇಳಿದ್ದರು. ಅವರ ಈ ಮಾತು ನನಗೆ ಇಷ್ಟವಾಗಿದೆ” ಎಂದು ಟ್ರಂಪ್​ ಹೇಳಿದ್ದರು ಎಂದು ಪುಸ್ತಕದಲ್ಲಿ ಬರೆದಿದ್ದಾರೆ.

ಅಫ್ಘಾನಿಸ್ತಾನದಿಂದ ಯುಎಸ್​ಗೆ ನಷ್ಟವೇ ಆಗುತ್ತಿದೆ. ಇದೊಂದು ದುರಂತ. ಈ ವಿಚಾರದಲ್ಲಿ ನಮ್ಮ ಮಿತ್ರರೂ ಸಹಾಯ ಮಾಡುತ್ತಿಲ್ಲ. ಪಾಕಿಸ್ತಾನವೂ ನಮ್ಮ ಹಿತೈಷಿಗಳಲ್ಲ ಎಂದು ಟ್ರಂಪ್​ ಹೇಳಿದ್ದಾಗಿ ಪತ್ರಕರ್ತ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago