Featured

ಭಾರತದ ಪ್ರಧಾನಿ ಹಾಗೂ ಪಾಕ್ ಪ್ರಧಾನಿ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಇಬ್ಬರೂ ಒಂದೇ ತಾಯಿಯ ಮಕ್ಕಳು ಇದ್ದಂತೆ :  ಬಿ.ರಮಾನಾಥ ರೈ -Vishwanews24

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ಒಂದೇ ಮನೋಭಾವ ಹೊಂದಿರುವ, ಒಂದೇ ತಾಯಿಯ ಮಕ್ಕಳು ಇದ್ದಂತೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವಾಗ್ದಾಳಿ ನಡೆಸಿದರು.

ಮಂಗಳೂರಿನ ಕಾಂಗ್ರೆಸ್ ‌ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಸಿಕಾಂತ್ ಸೆಂಥಿಲ್ ಅವರಿಗೆ ದೇಶದ ಆಡಳಿತ ಯಂತ್ರದ ಬಗ್ಗೆ ಅಸಮಾಧಾನವಿದೆ. ಸೆಂಥಿಲ್ ಒಬ್ಬ ಪ್ರಾಮಾಣಿಕ ಮತ್ತು ಜನಪರ ಜಿಲ್ಲಾಧಿಕಾರಿ ಸೆಂಥಿಲ್ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಡಿ.ಕೆ.ರವಿ ಆತ್ಮಹತ್ಯೆ ಆದಾಗ ರಾಜಕೀಯ ಮಾಡಿದ್ದು ಬಿಜೆಪಿ, ಸಾವಿನಲ್ಲಿ ಕೀಳು ಮಟ್ಟದ ರಾಜಕೀಯ ಈ ಜಿಲ್ಲೆಯಲ್ಲಿ ಮಾಡಿದ್ದು ಬಿಜೆಪಿ ಪಕ್ಷ. ನಾವು ಉತ್ತಮ ಅಧಿಕಾರಿ ಸೆಂಥಿಲ್ ಇರಬೇಕು ಅಂತ ಪ್ರತಿಭಟನೆ ಮಾಡಿದ್ದೇವೆ.

ಇನ್ನು ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಡಿಸಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ‌ಕೆಲಸ ಮಾಡಿದ್ದಾರೆ. ಸೆಂಥಿಲ್ ‌ಪ್ರಾಮಾಣಿಕತೆ ಬಗ್ಗೆ ಈವರೆಗೆ ಯಾರೂ ಮಾತನಾಡಿಲ್ಲ ಆದ್ರೆ ಇನ್ನು ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದ್ದಕ್ಕೆ ಇಂಥ ಕುಕೃತ್ಯ ಶುರುವಾಗುತ್ತದೆ. ಲಾರಿ ‌ಮಾಲಕರ ಸಂಘ ಸೇರಿ ಬೇರೆ ರೀತಿಯಲ್ಲಿ ಆರೋಪಕ್ಕೆ ಸಂಘಟನೆಗಳನ್ನ ಬಳಸಲಾಗುತ್ತದೆ ಈಗಾಗಲೇ ಸಸಿಕಾಂತ್ ಸೆಂಥಿಲ್ ಭ್ರಷ್ಟ ಜಿಲ್ಲಾಧಿಕಾರಿ ಎಂಬ ಪಟ್ಟವನ್ನು ಕಟ್ಟುತ್ತಿದ್ದು, ನಾವು ಈ ಮಾತನ್ನು ಒಪ್ಪಲ್ಲ, ಇದು ನಿರಾಧಾರ ಮೊನ್ನೆಯವರೆಗೆ ಬಿಜೆಪಿ ಮುಖಂಡರು ಕೂಡ ಸೆಂಥಿಲ್ ಒಳ್ಳೆಯ ಅಧಿಕಾರಿ ಅಂದಿದ್ದಾರೆ ಈಗ ಅವರನ್ನ ತಪ್ಪಿತಸ್ಥರು ಮಾಡುವ ಕೆಲಸ ನಡೆಯುತ್ತಿದೆ ಎಂದರು.

ಪ್ರಧಾನಿ ಮೋದಿ ಅವರು ತಮ್ಮ ಸ್ವಾರ್ಥ ಸಾಧನೆಗಾಗಿ ದೇಶವನ್ನೇ ಬಲಿ ಕೊಡುತ್ತಿದ್ದಾರೆ. ಇಂಥವರಿಂದ ಅಭಿವೃದ್ಧಿ ಬಯಸುವುದು ಕನಸಿನ ಮಾತು. ದೇಶದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನರೇಂದ್ರ ಮೋದಿ ಪಾಕಿಸ್ತಾನದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೆ, ಅತ್ತ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್ ಅವರು ಅದೇ ರೀತಿಯಲ್ಲಿ ಭಾರತವನ್ನು ಮೂದಲಿಸುತ್ತಾರೆ’ ಎಂದು ಹೇಳಿದರು.

‘ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ನಾವು ಹಿಂದೂಗಳೇ, ನಾವು ಹಿಂದುತ್ವದ ಮೇಲೆ ಅಪಾರ ನಂಬಿಕೆ ಇಟ್ಟವರು. ಅವರೊಬ್ಬರೇ ಹಿಂದೂವಲ್ಲ. ನಾವು ಕೂಡಾ ಹಿಂದುತ್ವದ ತಳಹದಿಯ ಆಧಾರದ ಮೇಲೆ ರಾಜಕಾರಣ ಮಾಡುತ್ತಿದ್ದೇವೆ’ ಎಂದರು.

Vishwa News 24

Recent Posts

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

26 minutes ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

32 minutes ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

1 hour ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

1 hour ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

2 hours ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

2 hours ago