Featured

ಭಾರತದ ಪ್ರಧಾನಿ ಹಾಗೂ ಪಾಕ್ ಪ್ರಧಾನಿ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಇಬ್ಬರೂ ಒಂದೇ ತಾಯಿಯ ಮಕ್ಕಳು ಇದ್ದಂತೆ :  ಬಿ.ರಮಾನಾಥ ರೈ -Vishwanews24

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ಒಂದೇ ಮನೋಭಾವ ಹೊಂದಿರುವ, ಒಂದೇ ತಾಯಿಯ ಮಕ್ಕಳು ಇದ್ದಂತೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವಾಗ್ದಾಳಿ ನಡೆಸಿದರು.

ಮಂಗಳೂರಿನ ಕಾಂಗ್ರೆಸ್ ‌ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಸಿಕಾಂತ್ ಸೆಂಥಿಲ್ ಅವರಿಗೆ ದೇಶದ ಆಡಳಿತ ಯಂತ್ರದ ಬಗ್ಗೆ ಅಸಮಾಧಾನವಿದೆ. ಸೆಂಥಿಲ್ ಒಬ್ಬ ಪ್ರಾಮಾಣಿಕ ಮತ್ತು ಜನಪರ ಜಿಲ್ಲಾಧಿಕಾರಿ ಸೆಂಥಿಲ್ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಡಿ.ಕೆ.ರವಿ ಆತ್ಮಹತ್ಯೆ ಆದಾಗ ರಾಜಕೀಯ ಮಾಡಿದ್ದು ಬಿಜೆಪಿ, ಸಾವಿನಲ್ಲಿ ಕೀಳು ಮಟ್ಟದ ರಾಜಕೀಯ ಈ ಜಿಲ್ಲೆಯಲ್ಲಿ ಮಾಡಿದ್ದು ಬಿಜೆಪಿ ಪಕ್ಷ. ನಾವು ಉತ್ತಮ ಅಧಿಕಾರಿ ಸೆಂಥಿಲ್ ಇರಬೇಕು ಅಂತ ಪ್ರತಿಭಟನೆ ಮಾಡಿದ್ದೇವೆ.

ಇನ್ನು ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಡಿಸಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ‌ಕೆಲಸ ಮಾಡಿದ್ದಾರೆ. ಸೆಂಥಿಲ್ ‌ಪ್ರಾಮಾಣಿಕತೆ ಬಗ್ಗೆ ಈವರೆಗೆ ಯಾರೂ ಮಾತನಾಡಿಲ್ಲ ಆದ್ರೆ ಇನ್ನು ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದ್ದಕ್ಕೆ ಇಂಥ ಕುಕೃತ್ಯ ಶುರುವಾಗುತ್ತದೆ. ಲಾರಿ ‌ಮಾಲಕರ ಸಂಘ ಸೇರಿ ಬೇರೆ ರೀತಿಯಲ್ಲಿ ಆರೋಪಕ್ಕೆ ಸಂಘಟನೆಗಳನ್ನ ಬಳಸಲಾಗುತ್ತದೆ ಈಗಾಗಲೇ ಸಸಿಕಾಂತ್ ಸೆಂಥಿಲ್ ಭ್ರಷ್ಟ ಜಿಲ್ಲಾಧಿಕಾರಿ ಎಂಬ ಪಟ್ಟವನ್ನು ಕಟ್ಟುತ್ತಿದ್ದು, ನಾವು ಈ ಮಾತನ್ನು ಒಪ್ಪಲ್ಲ, ಇದು ನಿರಾಧಾರ ಮೊನ್ನೆಯವರೆಗೆ ಬಿಜೆಪಿ ಮುಖಂಡರು ಕೂಡ ಸೆಂಥಿಲ್ ಒಳ್ಳೆಯ ಅಧಿಕಾರಿ ಅಂದಿದ್ದಾರೆ ಈಗ ಅವರನ್ನ ತಪ್ಪಿತಸ್ಥರು ಮಾಡುವ ಕೆಲಸ ನಡೆಯುತ್ತಿದೆ ಎಂದರು.

ಪ್ರಧಾನಿ ಮೋದಿ ಅವರು ತಮ್ಮ ಸ್ವಾರ್ಥ ಸಾಧನೆಗಾಗಿ ದೇಶವನ್ನೇ ಬಲಿ ಕೊಡುತ್ತಿದ್ದಾರೆ. ಇಂಥವರಿಂದ ಅಭಿವೃದ್ಧಿ ಬಯಸುವುದು ಕನಸಿನ ಮಾತು. ದೇಶದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನರೇಂದ್ರ ಮೋದಿ ಪಾಕಿಸ್ತಾನದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೆ, ಅತ್ತ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್ ಅವರು ಅದೇ ರೀತಿಯಲ್ಲಿ ಭಾರತವನ್ನು ಮೂದಲಿಸುತ್ತಾರೆ’ ಎಂದು ಹೇಳಿದರು.

‘ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ನಾವು ಹಿಂದೂಗಳೇ, ನಾವು ಹಿಂದುತ್ವದ ಮೇಲೆ ಅಪಾರ ನಂಬಿಕೆ ಇಟ್ಟವರು. ಅವರೊಬ್ಬರೇ ಹಿಂದೂವಲ್ಲ. ನಾವು ಕೂಡಾ ಹಿಂದುತ್ವದ ತಳಹದಿಯ ಆಧಾರದ ಮೇಲೆ ರಾಜಕಾರಣ ಮಾಡುತ್ತಿದ್ದೇವೆ’ ಎಂದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago