ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹೇಡಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.
ಕೊರೊನಾ ನಿಭಾಯಿಸುವ ಬಗ್ಗೆ ಸರ್ಕಾರದ ಪ್ರಶ್ನೆಗಳನ್ನು ಕೇಳುತ್ತಿರುವ ಕಾಂಗ್ರೆಸ್ನ “ಜಿಮ್ಮೆದಾರ್ ಕೌನ್ (ಯಾರು ಜವಾಬ್ದಾರರು)” ಅಭಿಯಾನದ ಭಾಗವಾಗಿ ಪ್ರಿಯಾಂಕ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಭಾರತದ ಪ್ರಧಾನಿ ಹೇಡಿಗಳಂತೆ ವರ್ತಿಸಿದ್ದಾರೆ. ಮೋದಿ ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ. ಅವರು ಬರೀ ರಾಜಕೀಯ ಮಾಡುತ್ತಾರೆ. ಸತ್ಯಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಾರೆ. ಬರೀ ಪ್ರಚಾರ ಮಾಡುತ್ತಾರೆ” ಎಂದು ದೂರಿದ್ದಾರೆ.
ಹಾಗೆಯೇ “ಈಗ ನಾವು ಪ್ರಧಾನಿ ಮೋದಿಯನ್ನು ಪ್ರಶ್ನಿಸುವ ಸಮಯ ಬಂದಿದೆ, ಇದಕ್ಕೆ ಯಾರು ಜವಾಬ್ದಾರರು? ಪ್ರಧಾನಿ ಮೋದಿ ಸರ್ಕಾರವು ಸಾಂಕ್ರಾಮಿಕ ರೋಗದ ಆರಂಭದಿಂದಲೂ, ಈವರೆಗೂ ಸರಿಯಾಗಿ ಪರಿಸ್ಥಿತಿ ನಿಭಾಯಿಸಿಲ್ಲ. ಸರ್ಕಾರ ಬರೀ ಸತ್ಯವನ್ನು ಮರೆಮಾಡಲು ಮತ್ತು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನವನ್ನು ಮಾತ್ರ ಮಾಡಿದೆ ಎಂದು ದೂರಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…