Featured

ಭಾರತದ ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

ಭಾರತದ ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

ನವದೆಹಲಿ : ಬಜೆಟ್ ಅಧಿವೇಶನದ ಆರಂಭದ ಅಂಗವಾಗಿ ಶುಕ್ರವಾರ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಿದರು ಮತ್ತು ದಿವಂಗತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಭಾರತವು ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾತನಾಡಿ, ‘ಭಾರತ ವಿಶ್ವದ ಲ್ಲೇ ಅತಿ ದೊಡ್ಡ ಲಸಿಕೆ ಕಾರ್ಯಕ್ರಮವನ್ನು ನಡೆಸುತ್ತಿದೆ ಎಂಬುದು ಹೆಮ್ಮೆಯ ವಿಷಯ. ಈ ಕಾರ್ಯಕ್ರಮದ ಎರಡೂ ಲಸಿಕೆಗಳನ್ನು ಭಾರತದಲ್ಲಿ ತಯಾರಿಸಲಾಗುತ್ತದೆ. ಈ ಬಿಕ್ಕಟ್ಟಿನಲ್ಲಿ ಭಾರತವು ಮನುಕುಲದ ಮೇಲೆ ತನ್ನ ಜವಾಬ್ದಾರಿಯನ್ನು ಹೆಗಲಮೇಲೆ ಹೊತ್ತುಕೊಂಡು, ಹಲವಾರು ದೇಶಗಳಿಗೆ ಲಕ್ಷಗಟ್ಟಲೆ ಡೋಸ್ ಲಸಿಕೆಗಳನ್ನು ಒದಗಿಸಿತು’ ಎಂದು ಹೇಳಿದರು.
ಕನಿಷ್ಠ ಮಾರಾಟ ದರ (ಎಂಎಸ್ ಪಿ) ಯಥಾಸ್ಥಿತಿ ಕಾಯ್ದುಕೊಳ್ಳುವ ವಿವಾದದ ಬಗ್ಗೆ ಮಾತನಾಡಿದ ರಾಷ್ಟ್ರಪತಿ ಕೋವಿಂದ್ ಅವರು, ‘ಎಂಎಸ್ ಪಿ ಕುರಿತ ಸ್ವಾಮಿನಾಥನ್ ಆಯೋಗದ ವರದಿಯನ್ನು ನಾವು ಅನುಷ್ಠಾನಗೊಳಿಸಿದ್ದೇವೆ. ಸೂಕ್ಷ್ಮ ನೀರಾವರಿ ಗೆ ಒತ್ತು ನೀಡಿದ್ದೇವೆ’ ಎಂದರು.

ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆ -Vishwanews24

‘ಸರ್ಕಾರ ಕೈಗೊಂಡ ಹಲವು ಯೋಜನೆ ಲಾಭ ರೈತರಿಗೆ ದೊರಕುತ್ತಿರುವುದು ಸಂತಸ ತಂದಿದೆ. ದೇಶದಲ್ಲಿ ಬೆಳೆ, ಹಣ್ಣು, ತರಕಾರಿಗಳ ದಾಖಲೆ ಪ್ರಮಾಣದಲ್ಲಿ ಉತ್ಪಾದನೆಯಾಗಿದೆ. ಸಣ್ಣ ರೈತರಿಗಾಗಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ’ ಎಂದು ಮೋದಿ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಈಡು ಮಾಡಿರುವ ಮೂರು ಕೃಷಿ ಕಾನೂನುಗಳ ಬಗ್ಗೆ ಮಾತನಾಡಿದ ರಾಷ್ಟ್ರಪತಿ ಕೋವಿಂದ್, ‘ಸರ್ಕಾರ 7 ತಿಂಗಳ ಹಿಂದೆ ರೈತರ ಮೂರು ಬಿಲ್ ಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದೆ. ಇದರಿಂದ 10 ಕೋಟಿ ಸಣ್ಣ ರೈತರಿಗೆ ಅನುಕೂಲವಾಗಲಿದೆ. ಈ ಹಿಂದೆ ಅನೇಕ ರಾಜಕೀಯ ಪಕ್ಷಗಳು ಈ ಅಭಿಪ್ರಾಯಗಳನ್ನು ಬೆಂಬಲಿಸಿದವು. ಈ ಮಸೂದೆಗಳನ್ನು ಸಂಸತ್ತಿನಲ್ಲಿ ಸರಿಯಾಗಿ ಚರ್ಚಿಸಲಾಗಿತ್ತು, ಆದರೆ ಈಗ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅದನ್ನು ತಡೆಹಿಡಿಯಲಾಗಿದೆ’ ಎಂದು ಅವರು ಹೇಳಿದರು.

ರಾಷ್ಟ್ರಪತಿ ಕೋವಿಂದ್ ಅವರು, ‘ಮೂರು ಕೃಷಿ ಕಾನೂನುಗಳ ರಚನೆಗೂ ಮುನ್ನ ದೊರೆತಿರುವ ಹಕ್ಕುಗಳು ಮತ್ತು ಸೌಲಭ್ಯಗಳು ಕಡಿಮೆಆಗಿಲ್ಲ, ವಾಸ್ತವವಾಗಿ ಈ ಹೊಸ ಕೃಷಿ ಸುಧಾರಣೆಗಳಿಂದಾಗಿ ರೈತರಿಗೆ ಹೊಸ ಸೌಲಭ್ಯಗಳು ಮತ್ತು ಹಕ್ಕುಗಳನ್ನು ಸರ್ಕಾರ ಒದಗಿಸಿದೆ ಎಂಬುದನ್ನು ಸ್ಪಷ್ಟಪಡಿಸಲು ನನ್ನ ಸರ್ಕಾರ ಬಯಸುತ್ತದೆ’ ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದರು.

ಬೆಳ್ತಂಗಡಿ : ಜ.30 ರಂದು ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ -Vishwanews24

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

41 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

52 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

58 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

1 hour ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago