Featured

ಭಾರತದ ಮಾಜಿ ಆಟಗಾರ ಸಚಿನ್​​ ತೆಂಡೂಲ್ಕರ್​​ಗೆ ಐಸಿಸಿ ಹಾಲ್​​​ ಆಫ್​ ಫೇಮ್​​ ಗೌರವ -Vishwanews24

ನವದೆಹಲಿ,:ಭಾರತದ ಮಾಜಿ ಆಟಗಾರ ಸಚಿನ್‌ ತೆಂಡುಲ್ಕರ್‌ ಗೆ ಐಸಿಸಿ ಹೊಸತೊಂದು ಗೌರವ ನೀಡಿ ಪುರಸ್ಕರಿಸಿದೆ. ಲಿಟಲ್‌ ಮಾಸ್ಟರ್‌ ಗೆ ಐಸಿಸಿ ತನ್ನ ಅತ್ಯುನ್ನತ ʼ ಹಾಲ್‌ ಆಫ್‌ ಫೇಮ್‌ʼ ಗೌರವ ನೀಡಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್​​ ಸಮಿತಿ (ಐಸಿಸಿ) ನೀಡುವ ಪ್ರತಿಷ್ಠಿತ ಹಾಲ್​​ ಆಫ್​​ ಫೇಮ್​​​​​​​ ಗೌರವಕ್ಕೆ ಭಾರತ ಕ್ರಿಕೆಟ್​ ದಿಗ್ಗಜ ಸಚಿನ್​​ ತೆಂಡೂಲ್ಕರ್​ ಸೇರಿದಂತೆ ದಕ್ಷಿಣ ಆಫ್ರಿಕಾದ ಅಲನ್​​ ಡೊನಾಲ್ಡ್​​ ಹಾಗೂ ಆಸ್ಟ್ರೇಲಿಯಾದ ಮಹಿಳಾ ಆಟಗಾರ್ತಿ ಕ್ಯಾಥ್ರಿನ್​​​​ ಪಿಟ್ಜ್​​ಪ್ಯಾಟ್ರಿಕ್​​​​​​ ಅವರು ಪಾತ್ರರಾದರು.

ಲಂಡನ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಗೌರವಕ್ಕೆ ಪಾತ್ರರಾದರು. ಕ್ರಿಕೆಟ್​ ಜಗತ್ತಿನಲ್ಲಿ ಮೋಡಿ ಮಾಡಿರುವ ಸಚಿನ್​​ ತೆಂಡುಲ್ಕರ್​​​ ಹಾಲ್​​​ ಆಫ್​​ ಫೇಮ್​​ ಪಡೆದ ಭಾರತದ ಆರನೇ ಆಟಗಾರರಾಗಿದ್ದಾರೆ. ಇದಕ್ಕೂ ಮೊದಲು ಅನಿಲ್​​ ಕುಂಬ್ಳೆ, ಸುನೀಲ್​ ಗವಾಸ್ಕರ್​​, ಬಿಶನ್​​ ಸಿಂಗ್​​ ಬೇಡಿ, ಕಪಿಲ್​​ ದೇವ್​​​​ ಹಾಗೂ ರಾಹುಲ್​​ ದ್ರಾವಿಡ್​​​ ಈ ಗೌರವಕ್ಕೆ ಪಾತ್ರರಾಗಿದ್ದರು.

ಸಚಿನ್​​ ತಮ್ಮ ವೃತ್ತಿ ಜೀವನದಲ್ಲಿ ಒಟ್ಟು 200 ಟೆಸ್ಟ್​ಗಳಲ್ಲಿ 51 ಶತಕ ಹಾಗೂ 68 ಅರ್ಧ ಶತಕಳೊಂದಿಗೆ 15,921 ರನ್​​​​​ಗಳನ್ನು ಗಳಿಸಿದ್ದರೆ, 463 ಏಕದಿನ ಪಂದ್ಯಗಳಲ್ಲಿ 49 ಶತಕ ಹಾಗೂ 96 ಅರ್ಧ ಶತಗಳೊಂದಿಗೆ 18,426 ರನ್​​ ಗಳನ್ನು ಸಿಡಿಸುವ ಮೂಲಕ ದಾಖಲೆ ಸೃಷ್ಟಿಸಿದ್ದರು. ಈ ಎಲ್ಲ ಸಾಧನೆಯನ್ನು ಗುರುತಿಸಿ ಐಸಿಸಿ ಅವರನ್ನು ಗೌರವಿಸಿದೆ. ಅವರು 2013ರಲ್ಲಿ ತಮ್ಮ ಕೊನೆಯ ಟೆಸ್ಟ್​​ ಪಂದ್ಯವನ್ನು ಆಡಿ ಅಂತಾರಾಷ್ಟ್ರೀಯ ಕ್ರಿಕೆಟ್​ ಜೀವನಕ್ಕೆ ವಿದಾಯ ಹೇಳಿದ್ದರು.

“ಈ ಸಂದರ್ಭದಲ್ಲಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಜೀವನದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ನನ್ನ ಪಾಲಕರು, ಸಹೋದರ ಅಜಿತ್‌, ಪತ್ನಿ ಅಂಜಲಿ ನನ್ನ ಬದುಕಿನ ಆಧಾರ ಸ್ಥಂಭಗಳು. ರಮಾಕಾಂತ್‌ ಅಚ್ರೇಕರ್‌ ರಂತಹ ಕ್ರಿಕೆಟ್‌ ಕೋಚ್‌ ರನ್ನು ಪಡೆದಿದ್ದು ನನ್ನ ಅದೃಷ್ಟ” ಎಂದು ಸಚಿನ್‌ ಹೇಳಿಕೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಅತೀ ಹೆಚ್ಚು ರನ್‌ ಗಳಸಿರುವ ಸಾಧನೆ ಮಾಡಿರುವ ಸಚಿನ್‌, ಟೆಸ್ಟ್‌ ಕ್ರಿಕೆಟ್‌ ನಲ್ಲಿ 15,921 ರನ್‌ ಮತ್ತು ಏಕದಿನ ಕ್ರಿಕೆಟ್‌ ನಲ್ಲಿ 18426 ರನ್‌ ಗಳಿಸಿದ್ದಾರೆ.

ಸಚಿನ್‌ ತೆಂಡುಲ್ಕರ್‌ ಜೊತೆಗೆ ದಕ್ಷಿಣ ಆಫ್ರಿಕ ಮಾಜಿ ಆಟಗಾರ ಅಲನ್‌ ಡೊನಾಲ್ಡ್‌ ಮತ್ತು ಮಾಜಿ ಆಸೀಸ್‌ ಆಟಗಾರ ಕ್ಯಾಥ್ರಿನ್‌ ಫಿಜ್‌ ಪ್ಯಾಟ್ರಿಕ್‌ ಅವರಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ ನೀಡಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago