Featured

ಭಾರತದ ಮಾಜಿ ಆಟಗಾರ ಸಚಿನ್​​ ತೆಂಡೂಲ್ಕರ್​​ಗೆ ಐಸಿಸಿ ಹಾಲ್​​​ ಆಫ್​ ಫೇಮ್​​ ಗೌರವ -Vishwanews24

ನವದೆಹಲಿ,:ಭಾರತದ ಮಾಜಿ ಆಟಗಾರ ಸಚಿನ್‌ ತೆಂಡುಲ್ಕರ್‌ ಗೆ ಐಸಿಸಿ ಹೊಸತೊಂದು ಗೌರವ ನೀಡಿ ಪುರಸ್ಕರಿಸಿದೆ. ಲಿಟಲ್‌ ಮಾಸ್ಟರ್‌ ಗೆ ಐಸಿಸಿ ತನ್ನ ಅತ್ಯುನ್ನತ ʼ ಹಾಲ್‌ ಆಫ್‌ ಫೇಮ್‌ʼ ಗೌರವ ನೀಡಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್​​ ಸಮಿತಿ (ಐಸಿಸಿ) ನೀಡುವ ಪ್ರತಿಷ್ಠಿತ ಹಾಲ್​​ ಆಫ್​​ ಫೇಮ್​​​​​​​ ಗೌರವಕ್ಕೆ ಭಾರತ ಕ್ರಿಕೆಟ್​ ದಿಗ್ಗಜ ಸಚಿನ್​​ ತೆಂಡೂಲ್ಕರ್​ ಸೇರಿದಂತೆ ದಕ್ಷಿಣ ಆಫ್ರಿಕಾದ ಅಲನ್​​ ಡೊನಾಲ್ಡ್​​ ಹಾಗೂ ಆಸ್ಟ್ರೇಲಿಯಾದ ಮಹಿಳಾ ಆಟಗಾರ್ತಿ ಕ್ಯಾಥ್ರಿನ್​​​​ ಪಿಟ್ಜ್​​ಪ್ಯಾಟ್ರಿಕ್​​​​​​ ಅವರು ಪಾತ್ರರಾದರು.

ಲಂಡನ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಗೌರವಕ್ಕೆ ಪಾತ್ರರಾದರು. ಕ್ರಿಕೆಟ್​ ಜಗತ್ತಿನಲ್ಲಿ ಮೋಡಿ ಮಾಡಿರುವ ಸಚಿನ್​​ ತೆಂಡುಲ್ಕರ್​​​ ಹಾಲ್​​​ ಆಫ್​​ ಫೇಮ್​​ ಪಡೆದ ಭಾರತದ ಆರನೇ ಆಟಗಾರರಾಗಿದ್ದಾರೆ. ಇದಕ್ಕೂ ಮೊದಲು ಅನಿಲ್​​ ಕುಂಬ್ಳೆ, ಸುನೀಲ್​ ಗವಾಸ್ಕರ್​​, ಬಿಶನ್​​ ಸಿಂಗ್​​ ಬೇಡಿ, ಕಪಿಲ್​​ ದೇವ್​​​​ ಹಾಗೂ ರಾಹುಲ್​​ ದ್ರಾವಿಡ್​​​ ಈ ಗೌರವಕ್ಕೆ ಪಾತ್ರರಾಗಿದ್ದರು.

ಸಚಿನ್​​ ತಮ್ಮ ವೃತ್ತಿ ಜೀವನದಲ್ಲಿ ಒಟ್ಟು 200 ಟೆಸ್ಟ್​ಗಳಲ್ಲಿ 51 ಶತಕ ಹಾಗೂ 68 ಅರ್ಧ ಶತಕಳೊಂದಿಗೆ 15,921 ರನ್​​​​​ಗಳನ್ನು ಗಳಿಸಿದ್ದರೆ, 463 ಏಕದಿನ ಪಂದ್ಯಗಳಲ್ಲಿ 49 ಶತಕ ಹಾಗೂ 96 ಅರ್ಧ ಶತಗಳೊಂದಿಗೆ 18,426 ರನ್​​ ಗಳನ್ನು ಸಿಡಿಸುವ ಮೂಲಕ ದಾಖಲೆ ಸೃಷ್ಟಿಸಿದ್ದರು. ಈ ಎಲ್ಲ ಸಾಧನೆಯನ್ನು ಗುರುತಿಸಿ ಐಸಿಸಿ ಅವರನ್ನು ಗೌರವಿಸಿದೆ. ಅವರು 2013ರಲ್ಲಿ ತಮ್ಮ ಕೊನೆಯ ಟೆಸ್ಟ್​​ ಪಂದ್ಯವನ್ನು ಆಡಿ ಅಂತಾರಾಷ್ಟ್ರೀಯ ಕ್ರಿಕೆಟ್​ ಜೀವನಕ್ಕೆ ವಿದಾಯ ಹೇಳಿದ್ದರು.

“ಈ ಸಂದರ್ಭದಲ್ಲಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಜೀವನದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ನನ್ನ ಪಾಲಕರು, ಸಹೋದರ ಅಜಿತ್‌, ಪತ್ನಿ ಅಂಜಲಿ ನನ್ನ ಬದುಕಿನ ಆಧಾರ ಸ್ಥಂಭಗಳು. ರಮಾಕಾಂತ್‌ ಅಚ್ರೇಕರ್‌ ರಂತಹ ಕ್ರಿಕೆಟ್‌ ಕೋಚ್‌ ರನ್ನು ಪಡೆದಿದ್ದು ನನ್ನ ಅದೃಷ್ಟ” ಎಂದು ಸಚಿನ್‌ ಹೇಳಿಕೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಅತೀ ಹೆಚ್ಚು ರನ್‌ ಗಳಸಿರುವ ಸಾಧನೆ ಮಾಡಿರುವ ಸಚಿನ್‌, ಟೆಸ್ಟ್‌ ಕ್ರಿಕೆಟ್‌ ನಲ್ಲಿ 15,921 ರನ್‌ ಮತ್ತು ಏಕದಿನ ಕ್ರಿಕೆಟ್‌ ನಲ್ಲಿ 18426 ರನ್‌ ಗಳಿಸಿದ್ದಾರೆ.

ಸಚಿನ್‌ ತೆಂಡುಲ್ಕರ್‌ ಜೊತೆಗೆ ದಕ್ಷಿಣ ಆಫ್ರಿಕ ಮಾಜಿ ಆಟಗಾರ ಅಲನ್‌ ಡೊನಾಲ್ಡ್‌ ಮತ್ತು ಮಾಜಿ ಆಸೀಸ್‌ ಆಟಗಾರ ಕ್ಯಾಥ್ರಿನ್‌ ಫಿಜ್‌ ಪ್ಯಾಟ್ರಿಕ್‌ ಅವರಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ ನೀಡಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago