Featured

ಭಾರತದ ಮಾಜಿ ಆಟಗಾರ ಸಚಿನ್​​ ತೆಂಡೂಲ್ಕರ್​​ಗೆ ಐಸಿಸಿ ಹಾಲ್​​​ ಆಫ್​ ಫೇಮ್​​ ಗೌರವ -Vishwanews24

ನವದೆಹಲಿ,:ಭಾರತದ ಮಾಜಿ ಆಟಗಾರ ಸಚಿನ್‌ ತೆಂಡುಲ್ಕರ್‌ ಗೆ ಐಸಿಸಿ ಹೊಸತೊಂದು ಗೌರವ ನೀಡಿ ಪುರಸ್ಕರಿಸಿದೆ. ಲಿಟಲ್‌ ಮಾಸ್ಟರ್‌ ಗೆ ಐಸಿಸಿ ತನ್ನ ಅತ್ಯುನ್ನತ ʼ ಹಾಲ್‌ ಆಫ್‌ ಫೇಮ್‌ʼ ಗೌರವ ನೀಡಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್​​ ಸಮಿತಿ (ಐಸಿಸಿ) ನೀಡುವ ಪ್ರತಿಷ್ಠಿತ ಹಾಲ್​​ ಆಫ್​​ ಫೇಮ್​​​​​​​ ಗೌರವಕ್ಕೆ ಭಾರತ ಕ್ರಿಕೆಟ್​ ದಿಗ್ಗಜ ಸಚಿನ್​​ ತೆಂಡೂಲ್ಕರ್​ ಸೇರಿದಂತೆ ದಕ್ಷಿಣ ಆಫ್ರಿಕಾದ ಅಲನ್​​ ಡೊನಾಲ್ಡ್​​ ಹಾಗೂ ಆಸ್ಟ್ರೇಲಿಯಾದ ಮಹಿಳಾ ಆಟಗಾರ್ತಿ ಕ್ಯಾಥ್ರಿನ್​​​​ ಪಿಟ್ಜ್​​ಪ್ಯಾಟ್ರಿಕ್​​​​​​ ಅವರು ಪಾತ್ರರಾದರು.

ಲಂಡನ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಗೌರವಕ್ಕೆ ಪಾತ್ರರಾದರು. ಕ್ರಿಕೆಟ್​ ಜಗತ್ತಿನಲ್ಲಿ ಮೋಡಿ ಮಾಡಿರುವ ಸಚಿನ್​​ ತೆಂಡುಲ್ಕರ್​​​ ಹಾಲ್​​​ ಆಫ್​​ ಫೇಮ್​​ ಪಡೆದ ಭಾರತದ ಆರನೇ ಆಟಗಾರರಾಗಿದ್ದಾರೆ. ಇದಕ್ಕೂ ಮೊದಲು ಅನಿಲ್​​ ಕುಂಬ್ಳೆ, ಸುನೀಲ್​ ಗವಾಸ್ಕರ್​​, ಬಿಶನ್​​ ಸಿಂಗ್​​ ಬೇಡಿ, ಕಪಿಲ್​​ ದೇವ್​​​​ ಹಾಗೂ ರಾಹುಲ್​​ ದ್ರಾವಿಡ್​​​ ಈ ಗೌರವಕ್ಕೆ ಪಾತ್ರರಾಗಿದ್ದರು.

ಸಚಿನ್​​ ತಮ್ಮ ವೃತ್ತಿ ಜೀವನದಲ್ಲಿ ಒಟ್ಟು 200 ಟೆಸ್ಟ್​ಗಳಲ್ಲಿ 51 ಶತಕ ಹಾಗೂ 68 ಅರ್ಧ ಶತಕಳೊಂದಿಗೆ 15,921 ರನ್​​​​​ಗಳನ್ನು ಗಳಿಸಿದ್ದರೆ, 463 ಏಕದಿನ ಪಂದ್ಯಗಳಲ್ಲಿ 49 ಶತಕ ಹಾಗೂ 96 ಅರ್ಧ ಶತಗಳೊಂದಿಗೆ 18,426 ರನ್​​ ಗಳನ್ನು ಸಿಡಿಸುವ ಮೂಲಕ ದಾಖಲೆ ಸೃಷ್ಟಿಸಿದ್ದರು. ಈ ಎಲ್ಲ ಸಾಧನೆಯನ್ನು ಗುರುತಿಸಿ ಐಸಿಸಿ ಅವರನ್ನು ಗೌರವಿಸಿದೆ. ಅವರು 2013ರಲ್ಲಿ ತಮ್ಮ ಕೊನೆಯ ಟೆಸ್ಟ್​​ ಪಂದ್ಯವನ್ನು ಆಡಿ ಅಂತಾರಾಷ್ಟ್ರೀಯ ಕ್ರಿಕೆಟ್​ ಜೀವನಕ್ಕೆ ವಿದಾಯ ಹೇಳಿದ್ದರು.

“ಈ ಸಂದರ್ಭದಲ್ಲಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಜೀವನದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ನನ್ನ ಪಾಲಕರು, ಸಹೋದರ ಅಜಿತ್‌, ಪತ್ನಿ ಅಂಜಲಿ ನನ್ನ ಬದುಕಿನ ಆಧಾರ ಸ್ಥಂಭಗಳು. ರಮಾಕಾಂತ್‌ ಅಚ್ರೇಕರ್‌ ರಂತಹ ಕ್ರಿಕೆಟ್‌ ಕೋಚ್‌ ರನ್ನು ಪಡೆದಿದ್ದು ನನ್ನ ಅದೃಷ್ಟ” ಎಂದು ಸಚಿನ್‌ ಹೇಳಿಕೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಅತೀ ಹೆಚ್ಚು ರನ್‌ ಗಳಸಿರುವ ಸಾಧನೆ ಮಾಡಿರುವ ಸಚಿನ್‌, ಟೆಸ್ಟ್‌ ಕ್ರಿಕೆಟ್‌ ನಲ್ಲಿ 15,921 ರನ್‌ ಮತ್ತು ಏಕದಿನ ಕ್ರಿಕೆಟ್‌ ನಲ್ಲಿ 18426 ರನ್‌ ಗಳಿಸಿದ್ದಾರೆ.

ಸಚಿನ್‌ ತೆಂಡುಲ್ಕರ್‌ ಜೊತೆಗೆ ದಕ್ಷಿಣ ಆಫ್ರಿಕ ಮಾಜಿ ಆಟಗಾರ ಅಲನ್‌ ಡೊನಾಲ್ಡ್‌ ಮತ್ತು ಮಾಜಿ ಆಸೀಸ್‌ ಆಟಗಾರ ಕ್ಯಾಥ್ರಿನ್‌ ಫಿಜ್‌ ಪ್ಯಾಟ್ರಿಕ್‌ ಅವರಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ ನೀಡಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

21 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

23 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

23 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago