ನವದೆಹಲಿ: ಭಾರತ ಶಾಂತಿ ಬಯಸುವ ರಾಷ್ಟ್ರವಾಗಿದ್ದು, ಶಾಂತಿಗಾಗಿ ಅದರ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಆದರೆ ಭಾರತದ ಮೇಲೆ ಯಾರಾದರೂ ದಾಳಿಗೆ ಮುಂದಾದರೆ ಅವರಿಗೆ ತಕ್ಕ ಪ್ರತ್ಯುತ್ತರ ನೀಡುವುದು ನಮ್ಮ ಜವಾಬ್ದಾರಿ ಕೂಡ ಹೌದು ಎಂದು ವೆಂಕಯ್ಯ ನಾಯ್ಡು ಎಚ್ಚರಿಕೆ ನೀಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ ಎರಡು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಮಾಡಿರುವ 95 ಭಾಷಣಗಳ ಸಂಗ್ರಹ ‘ಲೋಕತಂತ್ರ ಕೆ ಸ್ವರ್’ ಹಿಂದಿ ಅವತರಣಿಕೆ ಮತ್ತು‘ರಿಪಬ್ಲಿಕನ್ ಎಥಿಕ್’ ಇಂಗ್ಲಿಷ್ ಅವತರಣಿಕೆ ಕೃತಿಗಳನ್ನು ಲೋಕಾರ್ಪಣೆ ಮಾಡಿ ವೆಂಕಯ್ಯ ನಾಯ್ಡು ಮಾತನಾಡಿದರು.
ವಸುದೈವ ಕುಟುಂಬಕಂ ಎಂಬ ಪರಿಕಲ್ಪನೆಯಲ್ಲಿ ಭಾರತಕ್ಕೆ ನಂಬಿಕೆ ಇದ್ದು, ಇಡೀ ವಿಶ್ವವೇ ಒಂದು ಕುಟುಂಬ ಎಂದು ನಂಬಿರುವ ನಾವು ಯಾವುದೇ ದೇಶದ ಮೇಲೆ ತಾನಾಗಿ ದಾಳಿ ಮಾಡಿಲ್ಲ ಎಂದು ನಾಯ್ಡು ನುಡಿದರು.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂವಾದ ಮತ್ತು ಚರ್ಚೆಗಳ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶಗಳಿವೆ. ಅದೇ ರೀತಿ ಯಾವುದೇ ಸಮಸ್ಯೆಯನ್ನು ಮಾತುಕತೆ ಮತ್ತು ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಬಹುದು ಎಂಬ ನಂಬಿಕೆಯೂ ನಮ್ಮದಾಗಿದೆ ಎಂದು ನಾಯ್ಡು ಈ ವೇಳೆ ಹೇಳಿದರು.
ಭಾರತ ಆಕ್ರಮಣಶೀಲ ರಾಷ್ಟ್ರವಲ್ಲ ಆದಾಗ್ಯೂ, ಯಾರಾದರೂ ಭಾರತದ ಮೇಲೆ ದಾಳಿ ಮಾಡಿದರೆ, ನಾವು ಅವರಿಗೆ ತಕ್ಕ ಉತ್ತರ ಕೊಡುತ್ತೇವೆ ಎಂದು ಉಪರಾಷ್ಟ್ರಪತಿ ಗುಡುಗಿದರು.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…